ಮನೆ ರಾಜ್ಯ ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಪ್ರಧಾನಿ ಮೋದಿ, ಅಮಿತ್ ಶಾಗೆ ಇಷ್ಟವಿರಬಹುದು: ಕೆ ಎಸ್ ಈಶ್ವರಪ್ಪ

ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಪ್ರಧಾನಿ ಮೋದಿ, ಅಮಿತ್ ಶಾಗೆ ಇಷ್ಟವಿರಬಹುದು: ಕೆ ಎಸ್ ಈಶ್ವರಪ್ಪ

0

ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡುತ್ತಿರುವುದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಇಷ್ಟ ಇರಬಹುದು ಎಂದು ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ಶನಿವಾರ ಹೇಳಿದ್ದಾರೆ.

Join Our Whatsapp Group

ನಾನು ಸ್ಪರ್ಧೆ ಮಾಡುತ್ತಿರುವುದು ಅವರಿಗೂ ಇಷ್ಟ ಇರಬಹುದು. ಇಲ್ಲವೆಂದಾದರೆ ನನ್ನನ್ನು ಯಾಕೆ ಪಕ್ಷದಿಂದ ಈವರೆಗೆ ತೆಗೆದು ಹಾಕಿಲ್ಲ? ಗೊತ್ತಿಲ್ಲ, ‘ಮೋದಿ, ಅಮಿತ್ ಶಾ ಹೇಳಿದರೆ ಈಶ್ವರಪ್ಪ ಹಿಂದೆ ಸರಿಯಬಹುದು’ ಎಂದು ಅವರು (ಬಿಎಸ್ ಯಡಿಯೂರಪ್ಪ, ವಿಜಯೇಂದ್ರ ಉದ್ದೇಶಿಸಿ) ಹೇಳುತ್ತಿದ್ದಾರೆ. ಅಮಿತ್ ಶಾ ಇನ್ನು ದೂರವಾಣಿ ಕರೆ ಮಾಡುವುದಿಲ್ಲ. ಅಪ್ಪ ಮಕ್ಕಳ ಕೈಯಿಂದ ಪಕ್ಷ ಬಿಡಿಸುವ ಉದ್ದೇಶ ಅವರದ್ದಿರಬಹುದು ಎಂದು ಈಶ್ವರಪ್ಪ ಹೇಳಿದ್ದಾರೆ.

ಇದರಿಂದಾಗಿ ಇದೀಗ ಈಶ್ವರಪ್ಪರನ್ನು ವರಿಷ್ಠರೇ ಚುನಾವಣೆಗೆ ನಿಲ್ಲಿಸಿದರೇ ಎಂಬ ಅನುಮಾನ ಮೂಡಿದೆ.

ನನ್ನ ಸ್ಪರ್ಧೆ ಮೋದಿ, ಅಮಿತ್ ಶಾ ಅವರಿಗೂ‌ ಒಪ್ಪಿಗೆ ಇರಬಹುದು. ಯಾಕೆಂದರೆ, ಅಪ್ಪ ಮಕ್ಕಳ ಕೈಯಿಂದ ಪಕ್ಷ ಬಿಡಿಸಬೇಕು ಎಂಬ ಉದ್ದೇಶ ಅವರದ್ದು ಇರಬಹುದು. ಮೋದಿ, ಅಮಿತ್ ಶಾ ಅವರೇ ಈಶ್ವರಪ್ಪ ಅವರನ್ನು ನಿಲ್ಲಿಸಿರಬಹುದು ಎಂಬ ಅಭಿಪ್ರಾಯ ಜನರದ್ದಾಗಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಯಡಿಯೂರಪ್ಪ ಅವರು ಅಷ್ಟು ಮೋಸ ಮಾಡಿದ್ದಾರೆ. ಯಾವ ಮುಖ ಇಟ್ಟುಕೊಂಡು ನನ್ನ ಬಳಿ ಬರುತ್ತಾರೆ? ಯಾವ ಯಾವ ಪಕ್ಷಕ್ಕೆ ಹೋಗಿ ಬಂದವರು ಅವರು. ಅಧಿಕಾರಕ್ಕಾಗಿ ಕೆಜೆಪಿ ಕಟ್ಟಿದರು. ನಾನು ಅವರ ಬಳಿ ಕೆಜೆಪಿ ಬೇಡ ಅಂದಿದ್ದೆ. ನಾನೇ ಮತ್ತೆ ವಾಪಸ್ ಯಡಿಯೂರಪ್ಪ ಅವರನ್ನು ಬಿಜೆಪಿಗೆ ವಾಪಸ್ ಕರೆ ತಂದೆ. ಕಾರ್ಯಕರ್ತರು ‘ಗೋ ಬ್ಯಾಕ್ ಶೋಭಾ’ ಅಂದರೂ ಅವರಿಗೆ ಟಿಕೇಟ್ ಕೊಡಿಸಿದರು ಎಂದು ವಾಗ್ದಾಳಿ ನಡೆಸಿದರು.

ನನ್ನನ್ನು ‌ಪಕ್ಷದಿಂದ ತೆಗೆದರೆ ಮತ್ತೆ ನಾನು ಬಿಜೆಪಿಗೆ ಹೋಗುವವನೇ. ಶಿಕಾರಿಪುರ ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆ ಸಂದರ್ಭ ದುಡ್ಡು ಸುರಿದಷ್ಟು ದುಡ್ಡನ್ನು ಎಲ್ಲಿಯೂ ಸುರಿದಿಲ್ಲ. ಅಷ್ಟೊಂದು ಹಣವನ್ನು ಶಿಕಾರಿಪುರ ಕ್ಷೇತ್ರದಲ್ಲಿ ಸುರಿದರು. ಅಷ್ಟೊಂದು ಹಣ ಸುರಿದರೂ ಕೇವಲ 11 ಸಾವಿರ ಮತಗಳ ಅಂತರದಿಂದ ವಿಜಯೇಂದ್ರ ಗೆದ್ದಿದ್ದು. ಈ ಬಾರಿಯೂ ಅತಿ ಹೆಚ್ಚು ಹಣ ಸುರಿಯುವ ನಿರೀಕ್ಷೆ ಇದೆ ಎಂದು ಈಶ್ವರಪ್ಪ ಕಿಡಿಕಾರಿದರು.

ಈ ಚುನಾವಣೆ ಧರ್ಮ ಅಧರ್ಮದ ನಡುವಿನ ಚುನಾವಣೆ. ಈ ಬಾರಿ ಕಾರ್ಯಕರ್ತರು ಅಧರ್ಮ ಸೋಲಿಸಿ, ಧರ್ಮಕ್ಕೆ ಜಯ ಕೊಡುತ್ತಾರೆ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಿಂತ ನಾನು ಮುಂದೆ ಇದ್ದೇನೆ ಎಂದು ಈಶ್ವರಪ್ಪ ಹೇಳಿದರು.