ಮನೆ ಅಪರಾಧ ಸಾಹಿತಿ ಕುಂ. ವೀರಭದ್ರಪ್ಪ, ಸಿದ್ದರಾಮಯ್ಯ, ಹೆಚ್ ಡಿಕೆ ಸೇರಿದಂತೆ 61 ಜನರಿಗೆ ಜೀವ ಬೆದರಿಕೆ ಪತ್ರ

ಸಾಹಿತಿ ಕುಂ. ವೀರಭದ್ರಪ್ಪ, ಸಿದ್ದರಾಮಯ್ಯ, ಹೆಚ್ ಡಿಕೆ ಸೇರಿದಂತೆ 61 ಜನರಿಗೆ ಜೀವ ಬೆದರಿಕೆ ಪತ್ರ

0

ವಿಜಯನಗರ(Vijayanagar): ಸಾಹಿತಿ ಕುಂ.ವೀರಭದ್ರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಟ ಪ್ರಕಾಶ್ ರೈ, ನಿಜಗುಣಾನಂದ ಸ್ವಾಮೀಜಿ, ನಿಡುಮಾಮಿಡಿ ಶ್ರೀ, ಬಿ ಕೆ ಹರಿಪ್ರಸಾದ್, ದಿನೇಶ್ ಗುಂಡೂರಾವ್ ಸೇರಿದಂತೆ 61 ಜನರಿಗೆ ಜೀವ ಬೆದರಿಕೆ ಪತ್ರ ಬಂದಿದೆ.

ಜೀವ ಬೆದರಿಕೆ ಪತ್ರ

ಕುಂ.ವೀರಭದ್ರಪ್ಪ ಅವರ ಮನೆಗೆ ಕೊಲೆ ಬೆದರಿಕೆ ಪತ್ರ ಬಂದಿದ್ದು, ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿರೋ ಕುಂ.ವೀರಭದ್ರಪ್ಪ ಅವರಿಗೆ ಕಳೆದ ಒಂದೂವರೆ ತಿಂಗಳೊಳಗೆ ಬಂದ ಎರಡನೇ ಪತ್ರ ಇದಾಗಿದ್ದು, ‘ನೀವು ಪೇಪರ್ ಹೀರೋ ಆಗಲು ಹೊರಟಿದ್ದೀರಿ ಅಂತ’ ಪತ್ರದಲ್ಲಿ ಬರೆಯಲಾಗಿದೆ.

ಜೀವ ಬೆದರಿಕೆ ಪತ್ರ

ಮೊದಲ ಪತ್ರ ಬಂದಾಗ ವಿಜಯನಗರ ಎಸ್​ಪಿ ಡಾ. ಅರುಣ್ ಕೆ. ಅವರನ್ನ ಭೇಟಿಯಾಗಿ ರಕ್ಷಣೆ ನೀಡುವಂತೆ ಕುಂ. ವೀರಭದ್ರಪ್ಪನವರು ಮನವಿ ಮಾಡಿದ್ದರು. ಮೊದಲನೇ ಪತ್ರವನ್ನು ಭದ್ರಾವತಿಯಿಂದ ಪೋಸ್ಟ್​ ಮಾಡಲಾಗಿತ್ತು. ಈ ಸಲ ಚಿತ್ರದುರ್ಗದಿಂದ ಕಳುಹಿಸಲಾಗಿದೆ.

ಜೀವ ಬೆದರಿಕೆ ಪತ್ರ

ಪತ್ರದಲ್ಲಿ ‘ಸಾಹಿತಿಗಳು, ಪ್ರೊಫೆಸರ್‌ಗಳು, ಬುದ್ಧಿಜೀವಿಗಳು ಹಾಗೂ ನಿಮ್ಮ ದುಷ್ಟಕೂಟವು ದೇಶ ವಿರೋಧಿ, ಸಂವಿಧಾನ ವಿರೋಧಿ, ಹಿಂದೂ ಸಮಾಜ ಹೀಯಾಳಿಸುವ ಹೇಳಿಕೆಗಳನ್ನು ಕೊಡುತ್ತೀರಿ. ಒಂದು ಧರ್ಮದವರ ಪರ ಮಾತನಾಡುತ್ತೀರಿ. ನೀವೆಲ್ಲಾ ಕ್ಷಮೆ ಕೇಳಬೇಕು, ಇಲ್ಲ ಸಾಯಲು ಸಿದ್ಧರಾಗಿ. ಜೈ ಹಿಂದೂ ರಾಷ್ಟ್ರ, ಸಹಿಷ್ಣು ಹಿಂದೂ ಎಂದು ಪತ್ರದಲ್ಲಿ ಬರೆಯಲಾಗಿದೆ.

ಜೀವ ಬೆದರಿಕೆ ಪತ್ರ

ಈ ಕುರಿತು ಪ್ರತಿಕ್ರಿಯಿಸಿರುವ ಕುಂ.ವೀರಭದ್ರಪ್ಪ, ಇಂದು (ಮೇ 14) ಚಿತ್ರದುರ್ಗದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನಾನು ಭಾಗವಹಿಸಬೇಕು. ಈಗ ಅಲ್ಲಿಂದಲೇ ಪತ್ರ ಬಂದಿದ್ದು, ಇದರ ಹಿಂದಿನ ಮರ್ಮ ಏನೆಂಬುದು ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ.