ಚಾಮರಾಜನಗರ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ನಗರದಲ್ಲಿ ಬುಧವಾರ ಬೆಳಿಗ್ಗೆ ಕೆಲವೆಡೆ ಮರಳು ಮಾಫಿಯಾದ ಅನಭಿಷಿಕ್ತ ದೊರೆ ಗೋ ಬ್ಯಾಕ್ ಎಂಬ ಪೋಸ್ಟರ್ಗಳು ಕಂಡು ಬಂದವು.
ಮರಳು ಮಾಫಿಯಾದವರಿಗೆ ಮರಳಾಗಬೇಡಿ ಎಂಬ ಶೀರ್ಷಿಕೆಯಲ್ಲಿ ಮಂಗಳವಾರ ತಡರಾತ್ರಿ ಅಪರಿಚಿತರು ಪೋಸ್ಟರ್ಗಳನ್ನು ನಗರದ ಭುವನೇಶ್ವರಿ ವೃತ್ತ, ಜೋಡಿ ರಸ್ತೆ ಹಾಗೂ ಸಂತೆಮರಹಳ್ಳಿ ರಸ್ತೆಯ ಬದಿಗಳಲ್ಲಿ ಅಂಟಿಸಿದ್ದರು. ಈ ಪೋಸ್ಟರ್ ಗಳಲ್ಲಿ ಹಸ್ತದ ಚಿಹ್ನೆಯನ್ನು ತಲೆಕೆಳಕಾಗಿ ಹಾಕಿ ಎಕ್ಸ್ ಮಾರ್ಕ್ ಬರೆಯಲಾಗಿದೆ.
ಈ ವಿಷಯ ಪೊಲೀಸರಿಗೆ ತಿಳಿದು ನಂತರ ಆ ಪೋಸ್ಟರ್ ಗಳನ್ನು ತೆರವುಗೊಳಿಸಿದರು.
ಸಾಮಾಜಿಕ ಜಾಲತಾಣದಿಂದ ದೂರು: ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಮೈಸೂರು ಗ್ರಾಮಾಂತರ ವಿಭಾಗ ಕಾಂಗ್ರೆಸ್ನ ಸಾಮಾಜಿಕ ಜಾಲತಾಣ ವಿಭಾಗದ ಹೇಮಂತ್ಕುಮಾರ್ ದೂರು ಸಲ್ಲಿಸಿದ್ದಾರೆ. ಅಭ್ಯರ್ಥಿ ಸುನಿಲ್ ಬೋಸ್ ಅವರ ವ್ಯಕ್ತಿತ್ವ ಹರಣ ಮತ್ತು ಅಪಪ್ರಚಾರ ಮಾಡುವ ಪೋಸ್ಟರ್ ಗಳನ್ನು ಹಾಕಿರುವವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕೆಂದು ದೂರು ದಾಖಲಿಸಿದ್ದಾರೆ.
ಆರೋಪ ಸಾಬೀತಾದರೆ ನಾಮಪತ್ರ ಸಲ್ಲಿಸುವುದಿಲ್ಲ: ಈ ಕುರಿತು ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅಭ್ಯರ್ಥಿ ಸುನೀಲ್ ಬೋಸ್, ಬಿಜೆಪಿಯವರು ಹತಾಶರಾಗಿದ್ದಾರೆ
ನನ್ನ ಮೇಲಿಕ ಪ್ರಕರಣ ಹೈ ಕೋರ್ಟ್ನಲ್ಲಿ ವಜಾ ಆಗಿ ಕ್ಲೀನ್ ಚಿಟ್ ಸಿಕ್ಕಿದೆ. ನಾನು ನಿರ್ದೋಷಿ ಎಂದು ತೀರ್ಪು ನೀಡಿದೆ. ನನ್ನ ಮೇಲಿನ ಆರೋಪ ಸಾಬೀತು ಮಾಡಿದರೆ ನಾಮಪತ್ರ ಸಲ್ಲಿಸುವುದಿಲ್ಲ ಎಂದು ಸವಾಲು ಹಾಕಿದರು.
ಬಿಜೆಪಿಯವರಿಗೆ ಬೇರೆ ವಿಷಯಗಳಿಲ್ಲ. ಯಾರ ಮೇಲೂ ವೈಯಕ್ತಿಕ ಟೀಕೆ ಮಾಡಬಾರದೆಂದು ಚುನಾವಣಾ ಆಯೋಗವೇ ಹೇಳಿದೆ. ಪೋಸ್ಟರ್ ಅಂಟಿಸಿದರವರ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇನೆ. ಇದು ಬೆಜೆಪಿಯವರ ಕೆಲಸ ಎಂದು ಆರೋಪಿಸಿದರು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.