ಮನೆ ರಾಜ್ಯ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ

0

ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಸಿದ್ದಾರೆ.

Join Our Whatsapp Group

ಇಂದು(ಏ.04) ನಾಮಪತ್ರ ಸಲ್ಲಿಸಲು ಕೊನೆಯದಿನವಾದ್ದರಿಂದ ಬೃಹತ್​ ಮೆರವಣಿಗೆ ಮೂಲಕ ಜಯನಗರದ ಬಿಬಿಎಂಪಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ವೇಳೆ ತೇಜಸ್ವಿ ಸೂರ್ಯಗೆ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಸಾಥ್ ನೀಡಿದರು. ನಂತರ ಮಾತನಾಡಿದ ಅವರು, ‘ ಕಾಂಗ್ರೆಸ್ ನ ಎಲ್ಲ ಕಾರ್ಡ್​ಗಳು ರಿಜೆಕ್ಟ್ ಆಗುತ್ತವೆ. ಕಾಂಗ್ರೆಸ್ ಪಕ್ಷವೇ ಎಕ್ಸಪೈರ್ ಆಗಿದೆ. ಈಗ ಮೋದಿ ನಾಯಕತ್ವಕ್ಕೆ ಬೆಂಬಲ ಸಿಗುತ್ತದೆ. ನೋ ಬಾಲ್ ಮೇಲೆ ಸಿಕ್ಸರ್ ಹೊಡೆಯುತ್ತೇನೆ. ಜೊತೆಗೆ ಈ ಬಾರಿ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ 5 ಲಕ್ಷ ಅಂತರದಿಂದ ಗೆಲ್ಲುತ್ತದೆ ಎಂದರು.