ಬೆಂಗಳೂರು: ಎರಡನೇ ಹೆಂಡತಿ ಮಗ ಅಥವಾ ಮಗಳು, ಅಥವಾ ಅನೂರ್ಜಿತ ವಿವಾಹದಿಂದ ಜನಿಸಿದ ಮಗ ಅಥವಾ ಮಗಳು ಕೂಡ ಅನುಕಂಪದ ನೌಕರಿಗೆ ಅರ್ಹರು ಎಂದು ಹೈಕೋರ್ಟ್ ತೀರ್ಪು ನೀಡಿದೆ.
ಅನುಕಂಪದ ನೌಕರಿ ಕೋರಿಕೆ ತಿರಸ್ಕರಿಸಿದ್ದ ಚಿತ್ರದುರ್ಗ ನಗರದ ಸಭೆ ಆಯುಕ್ತರ ಕ್ರಮ ಪ್ರಶ್ನಿಸಿ ಭರತ್ ಕುಮಾರ್ ಎಂಬುವರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠ ಈ ಮಹತ್ವದ ತೀರ್ಪ ನೀಡಿದೆ.
ಹೈಕೋರ್ಟ್ ತನ್ನ ತೀರ್ಪಿನಲ್ಲಿ, “ತಮ್ಮ ಪೋಷಕರು ಯಾರಾಗಬೇಕೆಂದು ಮಕ್ಕಳು ಆಯ್ಕೆ ಮಾಡಿರುವುದಿಲ್ಲ. ಹೀಗಾಗಿ ಮೊದಲ ಪತ್ನಿಯ ಮಕ್ಕಳಂತೆಯೇ ಎರಡನೇ ಪತ್ನಿಯ ಮಕ್ಕಳು ಕೂಡ ಕಾನೂನಾತ್ಮಕ ವಾರಸುದಾರರೇ ಆಗಿರುತ್ತಾರೆ. ಎರಡನೇ ವಿವಾಹ ಅಥವಾ ಅನೂರ್ಜಿತ ವಿವಾಹಕ್ಕೆ ಜನಿಸಿದ ಮಕ್ಕಳು ಇಂತಹ ಅನುಕಂಪದ ನೌಕರಿಗೆ ಅರ್ಹರಲ್ಲ ಎನ್ನುವುದು ಅಥವಾ ದ್ವಿಪತ್ನಿತ್ವವನ್ನು ನಿಯಂತ್ರಿಸುವ ಉದ್ದೇಶದಿಂದ ಎರಡನೇ ಹೆಂಡತಿಯ ಮಕ್ಕಳಿಗೆ ಅನುಕಂಪದ ನೌಕರಿ ನಿರಾಕರಿಸುತ್ತೇವೆ ಎಂಬುದು ಒಪ್ಪುವಂತದ್ದಲ್ಲ.”
“ಇಂತಹ ನಡೆಯು ಎರಡನೇ ಪತ್ನಿ ಅಥವಾ ಅನೂರ್ಜಿತ ವಿವಾಹದ ಮಕ್ಕಳ ಘನತೆಯ ಬದುಕಿಗೆ ಅಪಚಾರ ಮಾಡಿದಂತೆ ಹಾಗೂ ಸಂವಿಧಾನದ ಆಶಯಗಳಿಗೆ ವಿರುದ್ಧದವಾದುದು ಎಂದು ಹೈಕೋರ್ಟ್ ವಿಭಾಗೀಯ ಪೀಠ ಈಗಾಗಲೇ ಹೇಳಿದೆ. ಯೂನಿಯನ್ ಆಫ್ ಇಂಡಿಯಾ ವರ್ಸಸ್ ವಿ.ಆರ್ ತ್ರಿಪಾಠಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಆಧಾರದಲ್ಲಿಯೇ ಈ ಹಿಂದೆ ಹೈಕೋರ್ಟ್ ವಿಭಾಗೀಯ ಪೀಠ ಈ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.” ಎಂದು ಹೈಕೋರ್ಟ್ ಹೇಳಿದೆ.
ಅಲ್ಲದೇ, ‘ಪ್ರಸ್ತುತ ಪ್ರಕರಣದ ಅರ್ಜಿದಾರರಿಗೆ 2ನೇ ಹೆಂಡತಿಯ ಮಗ ಎಂಬ ಕಾರಣ ನೀಡಿ ಚಿತ್ರದುರ್ಗ ನಗರಸಭೆ ಆಯುಕ್ತರ ಅನುಂಕಪದ ನೌಕರಿ ನಿರಾಕರಿಸಿರುವುದು ಕಾನೂನು ಬಾಹಿರ. ಆದ್ದರಿಂದ ನಗರಭೆ ಆಯುಕ್ತರು ಅನುಕಂಪದ ನೌಕರಿ ನಿರಾಕರಿಸಿ ನೀಡಿರುವ ಹಿಂಬರವನ್ನು ರದ್ದುಪಡಿಸಲಾಗುತ್ತಿದೆ. ಹಾಗೆಯೇ, ಅರ್ಜಿದಾರರ ಮನವಿಯನ್ನು ಮುಂದಿನ 2 ತಿಂಗಳಲ್ಲಿ ಕಾನೂನು ರೀತಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ” ಎಂದು ಹೈಕೋರ್ಟ್ ಆದೇಶಿಸಿದೆ.
ಪ್ರಕರಣದ ಹಿನ್ನಲೆ: ಅರ್ಜಿದಾರರ ತಂದೆ ಚಿತ್ರದುರ್ಗದ ಹಿರಿಯೂರು ನಗರಸಭೆಯಲ್ಲಿ ಕೆಲಸ ಮಾಡುತ್ತಿದ್ದು, ಸೇವಾವಧಿಯಲ್ಲೇ 2019ರ ನವೆಂಬರ್ 27ರಂದು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಅನುಕಂಪದ ನೌಕರಿ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಎರಡನೇ ಪತ್ನಿಯ ಮಗ ಎಂಬ ಕಾರಣಕ್ಕೆ ಅರ್ಜಿಯನ್ನು ಚಿತ್ರದುರ್ಗ ನಗರಸಭೆ ಆಯುಕ್ತರು ತಿರಸ್ಕರಿಸಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.