ಮೈಸೂರು: ಮತದಾನ ಮಾಡಿ ಸದೃಢ ಭಾರತ ನಿರ್ಮಾಣಕ್ಕೆ ಎಲ್ಲರೂ ಮುಂದಾಗಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ. ಗಾಯಿತ್ರಿ ಅವರು ತಿಳಿಸಿದರು.
ಇಂದು ಜಿಲ್ಲಾ ಸ್ವೀಪ್ ಕಾರ್ಯಕ್ರಮದಡಿ ಭಾರತೀಯ ಆಹಾರ ಸಂಶೋಧನಾ ಕೇಂದ್ರ ಆವರಣದಲ್ಲಿ (ಸಿಎಫ್ಟಿಆರ್ಐ) ಸಿಬ್ಬಂದಿಗಳಿಗೆ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕಡ್ಡಾಯ ಮತದಾನದ ಬಗ್ಗೆ ಪ್ರಮಾಣ ವಚನ ಬೋಧಿಸಿದ ಅವರು ನಗರ ಪ್ರದೇಶದ ಜನರು ಹೆಚ್ಚಾಗಿ ಮತದಾನ ಮಾಡುವುದಿಲ್ಲ ಎಂದು ಆರೋಪಗಳನ್ನು ದೂರ ಮಾಡಲು ನಗರ ಪ್ರದೇಶದ ವಿದ್ಯಾವಂತ ಮತದಾರರು ಮತದಾನ ಮಾಡಬೇಕು. ಕೇಂದ್ರ ಚುನಾವಣಾ ಆಯೋಗವು ಪ್ರತಿ ಚುನಾವಣೆಯಲ್ಲೂ ಸುಧಾರಣೆ ಮಾಡಿ ಮತದಾನ ಮಾಡಲು ಸುಲಭ ಮಾಡಿದೆ. ಸರ್ಕಾರಿ ನೌಕರರಲ್ಲಿ ಮತದಾನ ಕಡಿಮೆಯಾಗಿದೆ. ಈ ಬಾರಿ ಎಲ್ಲರೂ ಹೆಚ್ಚಾಗಿ ಮತದಾನ ಮಾಡಿ ಸದೃಢ ಭಾರತ ನಿರ್ಮಾಣಕ್ಕೆ ಮುಂದಾಗಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಎಫ್ ಟಿ ಆರ್ ನಿರ್ದೇಶಕರಾದ ಅನ್ನಪೂರ್ಣ ಅವರು ಮಾತನಾಡಿ ಮತದಾನ ಕೇಂದ್ರ ದೂರವಿದೆ ಎಂದು ಮತದಾನ ಮಾಡದೆ ಮತ ವಂಚನೆ ಮಾಡಿಕೊಳ್ಳಬೇಡಿ. ಗ್ರಾಮೀಣ ಪ್ರದೇಶಗಳಿಗಿಂತ ಈ ಬಾರಿ ನಗರ ಪ್ರದೇಶದ ಜನರು ಹೆಚ್ಚು ಮತದಾನ ಮಾಡಿ ನಮ್ಮ ಕರ್ತವ್ಯವನ್ನು ನಿಭಾಯಿಸೋಣ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಬಿ.ಎಸ್.ರಾಮ್ ಪ್ರಸಾದ್ ಅವರು, ಸ್ವೀಪ್ ಸಹಾಯಕ ನೋಡಲ್ ಅಧಿಕಾರಿ ಶಾಂತಾ ಅವರು, ಮಹಾನಗರ ಪಾಲಿಕೆ ಅಧಿಕಾರಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.