ಮನೆ ರಾಷ್ಟ್ರೀಯ ಪಶ್ಚಿಮ ಬಂಗಾಳದ ಎನ್‌ ಐಎ ಅಧಿಕಾರಿಗಳ ತಂಡದ ಮೇಲೆ ಹಲ್ಲೆ: ಅಧಿಕಾರಿಗೆ ಗಾಯ

ಪಶ್ಚಿಮ ಬಂಗಾಳದ ಎನ್‌ ಐಎ ಅಧಿಕಾರಿಗಳ ತಂಡದ ಮೇಲೆ ಹಲ್ಲೆ: ಅಧಿಕಾರಿಗೆ ಗಾಯ

0

ಕೋಲ್ಕತಾ: ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯ ಭೂಪತಿನಗರದಲ್ಲಿ ನಡೆದ ದಾಳಿಯ ಸಂದರ್ಭದಲ್ಲಿ ಭಯೋತ್ಪಾದಕ ನಿಗ್ರಹ ಸಂಸ್ಥೆಯಾದ ಎನ್‌ ಐಎ ಅಧಿಕಾರಿಗಳ ತಂಡದ ಮೇಲೆ ಹಲ್ಲೆ ನಡೆಸಿರುವ ಘಟನೆ ಶನಿವಾರ (ಏ.06) ನಡೆದಿರುವುದಾಗಿ ವರದಿ ತಿಳಿಸಿದೆ.

Join Our Whatsapp Group

ಎನ್‌ ಐಎ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ. 2022ರಲ್ಲಿ ಬಾಂಬ್‌ ಸ್ಫೋಟ ಪ್ರಕರಣದ ತನಿಖೆ ಹಿನ್ನೆಲೆಯಲ್ಲಿ ಎನ್‌ ಐಎ ತಂಡ ಭೂಪತಿನಗರದಲ್ಲಿ ದಾಳಿ ನಡೆಸಲು ಆಗಮಿಸಿತ್ತು.

ಶೋಧ ಕಾರ್ಯ ನಡೆಸುತ್ತಿದ್ದ ಎನ್‌ ಐಎ ಅಧಿಕಾರಿಗಳ ಮೇಲೆ ಗುಂಪೊಂದು ಏಕಾಏಕಿ ದಾಳಿ ನಡೆಸಿತ್ತು. ಈ ಸಂದರ್ಭದಲ್ಲಿ ಎನ್‌ ಐಎ ಅಧಿಕಾರಿಗಳು ಮತ್ತು ಗುಂಪಿನ ನಡುವೆ ಘರ್ಷಣೆ ನಡೆದಿದ್ದು, ಅಧಿಕಾರಿಗಳ ವಾಹನದ ಗಾಜುಗಳನ್ನು ಒಡೆದು ಹಾಕಿರುವ ಘಟನೆ ನಡೆದಿದೆ.

ಪೊಲೀಸರ ಮಾಹಿತಿ ಪ್ರಕಾರ, ಈ ಮೊದಲು ಎನ್‌ ಐಎ ಅಧಿಕಾರಿಗಳು ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿತ್ತು. ಇಂದು ಎನ್‌ ಐಎ ಅಧಿಕಾರಿಗಳ ಕಾರುಗಳು ಆಗಮಿಸಿದಾಗ ಸ್ಥಳೀಯರು ಕಾರುಗಳನ್ನು ಅಡ್ಡಗಟ್ಟಿ ಕಲ್ಲು ತೂರಾಟ ನಡೆಸಿದ್ದರು. ಇದರ ಪರಿಣಾಮ ಎನ್‌ ಐಎ ಅಧಿಕಾರಿಯೊಬ್ಬರು ಗಾಯಗೊಂಡಿರುವುದಾಗಿ ತಿಳಿಸಿದೆ.