ಬಳ್ಳಾರಿ: ದೇವರ ಮೂರ್ತಿ ಕುರಿಸುವ ವಿಚಾರವಾಗಿ ಎರಡು ಸಮುದಾಯದ ನಡುವೆ ಶುರುವಾದ ವಾಗ್ವಾದ ವಿಕೋಪಕ್ಕೆ ತಿರುಗಿ, ಕಲ್ಲು ತೂರಾಟವಾಗಿರುವ ಘಟನೆ ಬಳ್ಳಾರಿ ತಾಲೂಕಿನ ಕೊಳಗಲ್ ಗ್ರಾಮದಲ್ಲಿ ನಡೆದಿದೆ.
ಪವಾಡ ಪುರುಷ ಎರ್ರಿತಾತಾ ಸ್ವಾಮಿಯ ಮೂರ್ತಿ ಕೂರಿಸುವ ವಿಚಾರವಾಗಿ ಈ ಗಲಾಟೆ ನಡೆದಿದೆ.
15 ದಿನಗಳ ಹಿಂದೆ ಎರ್ರಿಸ್ವಾಮಿ ಮಠದಲ್ಲಿ ರಾತ್ರೋರಾತ್ರಿ ಮೂರ್ತಿ ಕುರಿಸಲಾಗಿತ್ತು. ಈ ಮೂರ್ತಿಯನ್ನು ತೆರವುಗೊಳಿಸುವಂತೆ ಇನ್ನೊಂದು ಸಮುದಾಯದವರು ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯ ಮೂರ್ತಿ ತೆರವುಗೊಳಿಸಲು ಆದೇಶ ನೀಡಿತ್ತು. ಆದರೆ ಪವಾಡ ಪುರುಷನ ಮೂರ್ತಿಯನ್ನು ತೆರವುಗೊಳಿಸಲ್ಲ ಅಂತ ಮೊತ್ತೊಂದು ಸಮುದಾಯದವರು ಹಠ ಹಿಡಿದ್ದಾರೆ. ಇದರಿಂದ ಎರಡು ಸಮುದಾಯದ ಮಧ್ಯೆ ವಾಗ್ವಾದ ಸಂಭವಿಸಿದೆ. ವಾಗ್ವಾದ ವಿಕೋಪಕ್ಕೆ ತಿರುಗಿ ಕಲ್ಲು ತೂರಾಟ ಸಂಭವಿಸಿದೆ.
ಈ ವಿಚಾರ ತಿಳಿದು ಗ್ರಾಮಕ್ಕೆ ಪಿಎಸ್ಐ ಸಂತೋಷ್ ಡಬ್ಬಿನ್, ಸಿಪಿಐ ಸತೀಶ್ ಸೇರಿದಂತೆ ಇನ್ನಿತರ ಪೊಲೀಸ್ ಸಿಬ್ಬಂದಿ ಬಂದಿದ್ದಾರೆ.
ಕಲ್ಲು ತೂರಾಟವನ್ನು ನಿಲ್ಲಿಸಲು ಮುಂದಾದಾಗ ಕಿಡಿಗೇಡಿಗಳು ಪೊಲೀಸರ ಮೇಲೂ ಕಲ್ಲು ಎಸೆದಿದ್ದಾರೆ. ಇದರಿಂದ ಪಿಎಸ್ಐ ಸಂತೋಷ್ ಡಬ್ಬಿನ್ ತಲೆಗೆ, ಸಿಪಿಐ ಸತೀಶ್ ಸೇರಿದಂತೆ ಮೂವರಿಗೆ ಗಾಯವಾಗಿದೆ. ಕೂಡಲೆ ಪಿಎಸ್ಐ ಸಂತೋಷ್ ಅವರನ್ನು ಬಳ್ಳಾರಿ ಟ್ರಾಮಾ ಕೇಕ್ ಸೆಂಟರ್ ಗೆ ಕರೆದುಕೊಂಡು ಹೋಗಿ, ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಮತ್ತು ಎಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎರಡು ಗುಂಪಿನ ಕಡೆಯಿಂದ 30ಕ್ಕೂ ಹೆಚ್ಚ ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎರ್ರಿಸ್ವಾಮಿ ಮಠದ ಸುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.