ಮನೆ ರಾಜಕೀಯ ಜಿ.ಡಿ.ಹರೀಶ್‌ ಗೌಡರು ಬಿಜೆಪಿಗೆ ಬಂದರೆ ಕ್ಷೇತ್ರ ತ್ಯಾಗಕ್ಕೆ ಸಿದ್ಧ: ಎಲ್.ನಾಗೇಂದ್ರ

ಜಿ.ಡಿ.ಹರೀಶ್‌ ಗೌಡರು ಬಿಜೆಪಿಗೆ ಬಂದರೆ ಕ್ಷೇತ್ರ ತ್ಯಾಗಕ್ಕೆ ಸಿದ್ಧ: ಎಲ್.ನಾಗೇಂದ್ರ

0

ಮೈಸೂರು (Mysuru)- ಶಾಸಕ ಜಿ.ಟಿ. ದೇವಗೌಡ (G.T.Devegowda) ಅವರ ಪುತ್ರ ಜಿ.ಡಿ.ಹರೀಶ್ ಗೌಡ (Harish Gowda) ಅವರು ಬಿಜೆಪಿಗೆ ಬಂದರೆ ಕ್ಷೇತ್ರ ಬಿಟ್ಟುಕೊಡಲು ಸಿದ್ಧನಿದ್ದೇನೆ ಎಂದು ಚಾಮರಾಜ ಕ್ಷೇತ್ರದ ಶಾಸಕರಾದ ಎಲ್.ನಾಗೇಂದ್ರ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕಾಗಿ ಕ್ಷೇತ್ರ ತ್ಯಾಗಕ್ಕೂ ನಾನು ಸಿದ್ಧನಿದ್ದೇನೆ. ಜಿ.ಟಿ.ದೇವೇಗೌಡ ಅವರು ಬಿಜೆಪಿ ಪಕ್ಷಕ್ಕೆ ಬಂದರೆ ಸ್ವಾಗತ ಕೋರುತ್ತೇನೆ. ಅವರ ಪುತ್ರ ಹರೀಶ್‌ ಗೌಡ ಅವರಿಗೆ ಚಾಮರಾಜ ಕ್ಷೇತ್ರದಿಂದ ಟಿಕೆಟ್‌ ನೀಡಬೇಕೆಂದು ಹೈಕಮಾಂಡ್‌ ನಿರ್ಧರಿಸಿದರೆ ನಾನು ಕ್ಷೇತ್ರ ತ್ಯಾಗ ಮಾಡುತ್ತೇನೆ ಎಂದರು.

ಅವರು ಪಕ್ಷಕ್ಕೆ ಬಂದು ಈ ಭಾಗದಲ್ಲಿ ಬಿಜೆಪಿಯ 8-10 ಸ್ಥಾನ ಗೆಲ್ಲಿಸುತ್ತಾರೆ ಎನ್ನುವುದಾದರೆ ನಾನು ಕ್ಷೇತ್ರ ತ್ಯಾಗಕ್ಕೂ ಸಿದ್ಧ. ನನಗೆ ಪಕ್ಷ ಎಲ್ಲವನ್ನೂ ನೀಡಿದೆ. ಪಕ್ಷಕ್ಕಾಗಿ ಕ್ಷೇತ್ರ ತ್ಯಾಗಕ್ಕೂ ನಾನು ಸಿದ್ಧನಾಗುತ್ತೇನೆ ಹೇಳಿದರು.

ಬಿಜೆಪಿಗೆ ಘಟಾನುಘಟಿ ನಾಯಕರು ಸೇರುತ್ತಾರೆ ಎಂದಿರುವ ಸಚಿವ ಎಸ್.‌ಟಿ. ಸೋಮಶೇಖರ್ ಹೇಳಿಕೆಯನ್ನು ಸಮರ್ಥಿಸಿಕೊಂಡ‌ ಎಲ್‌‌.ನಾಗೇಂದ್ರ ಅವರು, ನಿಜಕ್ಕೂ ಘಟಾನುಘಟಿ ನಾಯಕರು ಬಿಜೆಪಿಗೆ ಬರಲಿದ್ದಾರೆ. ಅವರು ಯಾರು ಅಂತಾ ಉಸ್ತುವಾರಿ ಸಚಿವರನ್ನೇ ಕೇಳಿ. ನಾನು ಬೇರೆ ಪಕ್ಷದ ಯಾವ ಶಾಸಕರನ್ನೂ ಸಂಪರ್ಕಿಸಿಲ್ಲ. ಒಟ್ಟಿನಲ್ಲಿ ಬಿಜೆಪಿಗೆ ಹಲವಾರು ಮಂದಿ ಸೇರ್ಪಡೆಯಾಗುವುದು ಖಚಿತ ಎಂದು ತಿಳಿಸಿದರು.