ಬೆಂಗಳೂರು: ಬೀದರ್, ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಹಾವೇರಿ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಸೇರಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನದಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಏರಿಕೆಯಾಗಿದೆ. ಭಾನುವಾರ ರಾಜ್ಯದಲ್ಲಿ ಅತಿ ಹೆಚ್ಚು ತಾಪಮಾನ ಯಾದಗಿರಿ ಜಿಲ್ಲೆಯಲ್ಲಿ 44.6 ಡಿಗ್ರಿ ದಾಖಲಾಗಿದೆ. ಉಳಿದಂತೆ, ಕಲಬುರಗಿ ಜಿಲ್ಲೆಯಲ್ಲಿ 43.1 ಡಿ.ಸೆ. ಉಷ್ಣಾಂಶ ದಾಖಲಾಗಿದೆ ಎಂದು ಮಾಹಿತಿ ನೀಡಿದೆ.
ಮಧ್ಯಾಹ್ನ 12ರಿಂದ ಮಧ್ಯಾಹ್ನ 3 ಗಂಟೆವರೆಗೆ ಬಿಸಿಲಿನಲ್ಲಿ ಓಡಾಡಬಾರದು. ಸಾಕಷ್ಟು ನೀರು ಕುಡಿಯಬೇಕು. ಹತ್ತಿ ಬಟ್ಟೆ ಧರಿಸಬೇಕು. ಬಿಸಿಲಿನಲ್ಲಿ ಓಡಾಡುವಾಗ ಛತ್ರಿ, ಕನ್ನಡಕ, ಟೋಪಿ, ಶೂ, ಚಪ್ಪಲಿ ಧರಿಸಬೇಕು. ಮದ್ಯಪಾನ ತ್ಯಜಿಸಿ ದ್ರವರೂಪದ ಪಾನೀಯ ಸೇವಿಸಬೇಕು. ಅಧಿಕ ಪೋಷಕಾಂಶ ಆಹಾರ ತಿನ್ನಬಾರದು. ವಾಹನ ನಿಲುಗಡೆ ಸ್ಥಳಗಳಲ್ಲಿ ಮಕ್ಕಳು, ಸಾಕು ಪ್ರಾಣಿಗಳನ್ನು ಬಿಡಬಾರದು ಎಂದು ಸಲಹೆ ನೀಡಿದೆ.
ಇದೇ ಮೊದಲ ಬಾರಿಗೆ ರಾಜಧಾನಿಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುತ್ತಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ 37.8 ಡಿ.ಸೆ ಉಷ್ಣಾಂಶ ವರದಿಯಾಗಿದೆ. 30 ವರ್ಷ ಬಳಿಕ ದಾಖಲೆ ಉಷ್ಣಾಂಶ ಕಂಡುಬರುತ್ತಿದೆ. 1996ರ ಮಾ. 29ರಂದು 37.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ವಾಡಿಕೆಗಿಂತ 2ರಿಂದ 3 ಡಿ.ಸೆ. ಹೆಚ್ಚು ತಾಪಮಾನ ದಾಖಲಾಗುತ್ತಿದೆ.
ರಾಜ್ಯದಲ್ಲಿ ತಾಪಮಾನ ಅಧಿಕವಾಗುತ್ತಿದ್ದು, ದೇಹದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಹಾಗಾಗಿ, ನಿರ್ಮಾಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ಅಗತ್ಯ ಎಚ್ಚರಿಕೆ ತೆಗೆದುಕೊಳ್ಳುವಂತೆ ಕಾರ್ಮಿಕ ಇಲಾಖೆ ಸಲಹೆ ಕೊಟ್ಟಿದೆ.
ಯಥೇಚ್ಛವಾಗಿ ನೀರು ಕುಡಿಯಬೇಕು, ಕೆಲಸದ ಸ್ಥಳಗಳಲ್ಲಿ ಸಾಧ್ಯವಾದಷ್ಟೂ ನೆರಳಿನ ವ್ಯವಸ್ಥೆ ಮಾಡಿಕೊಳ್ಳಬೇಕು, ಬಿಸಿಲಿನಲ್ಲಿ ಕೆಲಸ ಮಾಡುವುದನ್ನು ತಪ್ಪಿಸಬೇಕು, ದೇಹದಲ್ಲಿ ನೀರಿನ ಅಂಶ ಕಡಿಮೆಯಾಗದಂತೆ ಎಚ್ಚರ ವಹಿಸಬೇಕು, ಸಮಯಕ್ಕೆ ಸರಿಯಾಗಿ ಆರೋಗ್ಯಕರ ಆಹಾರ ಸೇವಿಸಬೇಕು ಎಂದು ಇಲಾಖೆ ಹಲವು ಸಲಹೆಗಳನ್ನು ನೀಡಿದೆ. ಏನಾದರೂ ಅನಾಹುತವಾದರೆ 155214 ಸಹಾಯವಾಣಿಗೆ ಕರೆ ಮಾಡಬಹುದು ಎಂದು ಹವಾಮಾನ ಇಲಾಖೆಯ ವಿಜ್ಞಾನಿ ಎ.ಪ್ರಸಾದ್ ಹೇಳಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.