ಮನೆ ರಾಜ್ಯ ಭಾರತದ ಅಖಂಡತೆ, ರಾಷ್ಟ್ರದ ರಕ್ಷಣೆಗೆ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದು ಅನಿವಾರ್ಯ: ಡಾ ಕೆ ಸುಧಾಕರ್  

ಭಾರತದ ಅಖಂಡತೆ, ರಾಷ್ಟ್ರದ ರಕ್ಷಣೆಗೆ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದು ಅನಿವಾರ್ಯ: ಡಾ ಕೆ ಸುಧಾಕರ್  

0

ದೇವನಹಳ್ಳಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್  ನಿನ್ನೆ ರಾತ್ರಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದರು.

Join Our Whatsapp Group

ನಿನ್ನೆ ರಾತ್ರಿ ದೇವನಹಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಚುನಾವಣಾ ಸಮಯದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ, ಆದರೆ ತಾವಾಗಿಯೇ ಅವು ಶಮನಗೊಳ್ಳುತ್ತವೆ ಎಂದು ಹೇಳಿದರು.

ಮುಂದುವರಿದು ಮಾತಾಡಿದ ಅವರು ಚಿಕ್ಕಬಳ್ಳಾಪುರ ಕ್ಷೇತ್ರ ಜನ ಬಿಜೆಪಿ ಅಭ್ಯರ್ಥಿಯಾಗಿರುವ ತನ್ನನ್ನು ಗೆಲ್ಲಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕೆಂದು ಜನ ಈಗಾಗಲೇ ತೀರ್ಮಾನ ತೆಗೆದುಕೊಂಡಿದ್ದಾರೆ. ಭಾರತದ ಅಖಂಡತೆಗೆ, ರಾಷ್ಟ್ರದ ರಕ್ಷಣೆಗೆ, ಭಾರತದ ಅಭಿವೃದ್ಧಿಗೆ ಮತ್ತು ವಿಕಸಿತ ಭಾರತಕ್ಕೆ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದು ಅನಿವಾರ್ಯ ಅನ್ನೋದನ್ನು ಜನ ಮನಗಂಡಿದ್ದಾರೆ ಎಂದು ಡಾ ಕೆ ಸುಧಾಕರ್ ಹೇಳಿದರು.