ಬೆಂಗಳೂರು: ರಾಜ್ಯದ ಬಿಜೆಪಿ ನಾಯಕರಲ್ಲಿ ಈಗ ಯಾವುದೇ ಅಸಮಾಧಾನವಿಲ್ಲ, ಎಲ್ಲರನ್ನೂ ಕರೆಸಿ ಅವರವರ ಸಮಸ್ಯೆಗಳನ್ನು ಬಗೆಹರಿಸಿದ್ದಾಗಿ ಹಿರಿಯ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ತಿಳಿಸಿದರು.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ರಾಜ್ಯ ಮತ್ತು ದೇಶದೆಲ್ಲೆಡೆ ಬಿಜೆಪಿ ಪರ ಉತ್ತಮ ವಾತಾವರಣವಿದೆ, 400 ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟುಕೊಳ್ಳಲಾಗಿದೆ, ಕರ್ನಾಟಕದ ಎಲ್ಲ 28 ಸ್ಥಾನಗಳನ್ನು ಜಯಿಸಿ ಗೆದ್ದವರನ್ನು ದೆಹಲಿಗೆ ಕರೆದುಕೊಂಡು ಬರುವುದಾಗಿ ಅಮಿತ್ ಶಾ ಅವರಿಗೆ ಭರವಸೆ ನೀಡಿದ್ದೇನೆ, ಜನರ ಬೆಂಬಲ ನಮ್ಮೊಂದಿಗಿದೆ, ದೇವರ ಕೃಪೆ ನಮ್ಮ ಮೇಲಿದೆ ಮತ್ತು ಎಲ್ಲೆಡೆ ಮೋದಿ ಅಲೆ ಇದೆ ಎಂದು ಯಡಿಯೂರಪ್ಪ ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 14 ರಂದು ಮಂಗಳೂರಲ್ಲಿ ರೋಡ್ ಶೋ ಮಾಡಲಿದ್ದಾರೆ, ಬೆಂಗಳೂರಲ್ಲೂ ಮಾಡಬಹುದು ಎಂದ ಯಡಿಯೂರಪ್ಪ ಬರ ಪರಿಹಾರ ನಿಧಿಯ ಬಗ್ಗೆ ಮಾತಾಡಲು ಇದು ಸೂಕ್ತ ಸಮಯವಲ್ಲ, ಚುನಾವಣೆಯ ನಂತರ ಮಾತಾಡುವುದಾಗಿ ಹೇಳಿದರು.
28 ಸ್ಥಾನ ಗೆಲ್ಲೋದು ಕನಸು ಅಂತ ಕಾಂಗ್ರೆಸ್ ನಾಯಕರು ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅವರು ಅದನ್ನೇ ಹೇಳುತ್ತಾರೆ, ಬೇರೇನಿದೆ ಅವರಲ್ಲಿ ಹೇಳೋದಿಕ್ಕೆ ಎಂದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.