ಪಾಂಡವಪುರ: ಅಪಘಾತ ಸೇರಿದಂತೆ ಇನ್ನಿತರ ಪ್ರಕರಣಗಳಲ್ಲಿ ಪೊಲೀಸರು ವಶಪಡಿಸಿಕೊಂಡು ನಿಲ್ಲಿಸಿದ ವಾಹನಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಧಗ ಧಗನೆ ಉರಿದ ಘಟನೆ ಬುಧವಾರ ನಡೆಯಿತು.
ಪಟ್ಟಣ ಪೊಲೀಸ್ ಠಾಣೆ ಹಿಂಭಾಗದ ಸಂತೆ ಮೈದಾನದಲ್ಲಿ ನಿಲ್ಲಿಸಿದ ವಾಹನಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಒಂದು ವಾಹನದಿಂದ ಇತರೆ ವಾಹನಕ್ಕೆ ಬೆಂಕಿ ವ್ಯಾಪಿಸಿದ ಪರಿಣಾಮ ಹಲವಾರು ವರ್ಷಗಳಿಂದ ಒಂದೇ ಸ್ಥಳದಲ್ಲಿ ನಿಂತಿದ್ದ ಆಟೋ, ಗೂಡ್ಸ್ ಆಟೋ, ವ್ಯಾನ್, ಕಾರು, ಜೆಸಿಬಿ ಸೇರಿದಂತೆ ಇತರೆ ವಾಹನಗಳು ಬೆಂಕಿಯಿಂದ ಭಾಗಶಃ ಸುಟ್ಟುಹೋಗಿದೆ.
ಬೆಂಕಿಯ ತೀವ್ರತೆಗೆ ವಾಹನಗಳಲ್ಲಿದ್ದ ಬ್ಯಾಟರಿ ಸಿಡಿದ್ದವು. ಕಾರಿನ ಸೀಟು ಮತ್ತು ಟೈರುಗಳು ಹತ್ತಿ ಉರಿದವು.ವಾಹನಗಳ ಸುತ್ತ ಮತ್ತಲು ಕಸ ಸುರಿಯುವುದರಿಂದ ಕಸಕ್ಕೆ ಮೊದಲು ಬೆಂಕಿ ತಗುಲಿ ಬಳಿಕ ವಾಹನಗಳಿಗೆ ವ್ಯಾಪಿಸಿದೆ ಎಂದು ಸ್ಥಳದಲ್ಲಿದ್ದ ನಾಗರೀಕರು ತಿಳಿಸಿದರು.
ಸ್ಥಳಕ್ಕಾಗಮಿಸಿದ ಅಗ್ನಿಶಾಮ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.ಅವಘಡದಿಂದ ಯಾವುದೇ ಅನಾಹುತ ಸಂಭವಿಸಿಲ್ಲ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.