ಮಂಗಳೂರು: ಮಂಗಳೂರು ಹೊರವಲಯದ ಅಡ್ಯಾರ್ ನಲ್ಲಿರುವ ಐಸ್ ಕ್ರೀಂ ಘಟಕವೊಂದರಲ್ಲಿ ಎಳನೀರು ಸೇವಿಸಿ ಹಲವರು ಅಸ್ವಸ್ಥಗೊಂಡಿದ್ದಾರೆ.
ಅಡ್ಯಾರ್, ಕಣ್ಣೂರು ಮತ್ತು ತುಂಬೆ ನಿವಾಸಿಗಳು ಏಪ್ರಿಲ್ 8 ರಂದು ಎಳನೀರು ಖರೀದಿಸಿದ್ದರು ಮತ್ತು ಮರುದಿನ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಳನೀರು ಕುಡಿದ ಬಳಿಕ ಅವರಲ್ಲಿ ವಾಂತಿ ಮತ್ತು ಭೇದಿ ಆರಂಭವಾಗಿತ್ತು. ಐಸ್ ಕ್ರೀಂ ಘಟಕದಲ್ಲಿ ಪ್ರತಿ ಲೀಟರ್ ಗೆ 40 ರೂ. ಬೆಲೆಯಲ್ಲಿ ಎಳನೀರು ಮಾರಾಟ ಮಾಡಲಾಗುತ್ತದೆ. ಹೀಗಾಗಿ ಈ ಪ್ರದೇಶದ ಹಲವಾರು ಜನ ಅದನ್ನು ಖರೀದಿಸುತ್ತಾರೆ.
ಅಸ್ವಸ್ಥರು ಮೊದಲಿಗೆ ಸ್ಥಳೀಯ ವೈದ್ಯರಿಂದ ಚಿಕಿತ್ಸೆ ಪಡೆದಿದ್ದಾರೆ. ನಂತರ ನಗರದ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಮೂವರು ಒಳರೋಗಿಗಳಾಗಿ ದಾಖಲಾಗಿದ್ದರೆ, 12 ಮಂದಿ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ಹೊರರೋಗಿ ಘಟಕದಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಬುಧವಾರ ವಾಟ್ಸ್ ಆ್ಯಪ್ ಮೂಲಕ ದೂರು ಸ್ವೀಕರಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಹಾಗೂ ಆಹಾರ ಭದ್ರತಾ ಅಧಿಕಾರಿ ಐಸ್ ಕ್ರೀಂ ಘಟಕಕ್ಕೆ ಭೇಟಿ ನೀಡಿ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದಾರೆ. ವರದಿಗಾಗಿ ಕಾಯಲಾಗುತ್ತಿದೆ. ಇದರ ಬೆನ್ನಲ್ಲೇ ಇಡೀ ಕಾರ್ಖಾನೆಯನ್ನು ಬಂದ್ ಮಾಡಿ ಸ್ವಚ್ಛಗೊಳಿಸಲಾಗಿದೆ. ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳನ್ನೂ ಅಧಿಕಾರಿಗಳು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಜತೆಗೆ, ಮಾಹಿತಿ ಪಡೆದರು.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಜನ ಆತಂಕಕ್ಕೆ ಒಳಗಾಗಬಾರದು ಎಂದು ಆರೋಗ್ಯಾಧಿಕಾರಿ ಮತ್ತು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.