ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆ ಆರೋಪ ಪ್ರಕರಣವು ಸಿಬಿಐನಿಂದ ರಾಜ್ಯ ಲೋಕಾಯುಕ್ತಕ್ಕೆ ವರ್ಗಾವಣೆ ಆದ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿರುವ ಅಧಿಕಾರಿಗಳು ಅಗತ್ಯ ದಾಖಲಾತಿ ಒದಗಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
2013 ರಿಂದ 2018 ರವರೆಗೆ 74.93 ಕೋಟಿ ಮೌಲ್ಯದ ಆಸ್ತಿ ಸಂಪಾದನೆ ಆರೋಪ ಸಂಬಂಧ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ರದ್ದುಪಡಿಸಿದ್ದ ರಾಜ್ಯ ಸರ್ಕಾರವು ಬಳಿಕ ತನಿಖೆ ಲೋಕಾಯುಕ್ತಕ್ಕೆ ವಹಿಸಿತ್ತು. ಈ ಸಂಬಂಧ ಪ್ರಕರಣದ ತನಿಖಾಧಿಕಾರಿ ಎಂ.ಹೆಚ್. ಸತೀಶ್ ಅವರು ಬುಧವಾರ ಡಿಕೆಶಿಗೆ ನೋಟಿಸ್ ನೀಡಿದ್ದಾರೆ. ಈ ಹಿಂದೆ ಸಿಬಿಐ ತನಿಖಾಧಿಕಾರಿಗಳಿಗೆ ಒದಗಿಸಿದ ಮಾಹಿತಿ ಹಾಗೂ ದಾಖಲಾತಿಗಳನ್ನು ಸಲ್ಲಿಸಬೇಕು ಎಂದು ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
ಶಿವಕುಮಾರ್ ಏಪ್ರಿಲ್ 1, 2013 ರಿಂದ ಏಪ್ರಿಲ್ 30, 2018 ರ ಅವಧಿಯಲ್ಲಿ ಆದಾಯಕ್ಕೆ ಅಸಮಾನವಾಗಿ 74.93 ಕೋಟಿ ರೂಪಾಯಿಗಳಷ್ಟು ಸಂಪತ್ತನ್ನು ಸಂಗ್ರಹಿಸಿದ್ದಾರೆ ಎಂದು ಸಿಬಿಐ ಹೇಳಿತ್ತು. ಈ ಸಂಬಂಧ 2019 ರ ಸೆಪ್ಟೆಂಬರ್ 9 ರಂದು ಜಾರಿ ನಿರ್ದೇಶನಾಲಯದ ಪತ್ರ ಆಧರಿಸಿ ಭ್ರಷ್ಟಾಚಾರ ನಿಗ್ರಹ ಕಾಯಿದೆ ಅಡಿ ತನಿಖೆ ನಡೆಸಲು ಅಂದಿನ ರಾಜ್ಯ ಸರ್ಕಾರ ಸಿಬಿಐಗೆ ಅನುಮತಿ ನೀಡಿತ್ತು.
ಇದನ್ನು ಪ್ರಶ್ನಿಸಿ ಶಿವಕುಮಾರ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ನಡುವೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಸಿಬಿಐಗೆ ನೀಡಿದ್ದ ಅನುಮತಿ ರದ್ದುಪಡಿಸಿ ಆದೇಶಿಸಿತ್ತು. ಈ ಸಂಬಂಧ ಸಿಬಿಐ ಕೂಡ ಹೈಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆ ನಡೆಯುತ್ತಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.