ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿನ ಹಣಕಾಸು ವರ್ಗಾವಣೆ ಆರೋಪದಲ್ಲಿ ತಿಹಾರ್ ಜೈಲಿನೊಳಗೆ ವಿಚಾರಣೆಗೊಳಪಟ್ಟಿದ್ದ ಬಿಆರ್ ಎಸ್ ನಾಯಕಿ ಕೆ.ಕವಿತಾ ಅವರನ್ನು ಸಿಬಿಐ ಗುರುವಾರ (ಏ.11) ಬಂಧಿಸಿರುವ ಘಟನೆ ನಡೆದಿದೆ.
ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕವಿತಾಳನ್ನು ಸಿಬಿಐ ಅಧಿಕಾರಿಗಳು ತನಿಖೆ ನಡೆಸಿದ್ದ ಬೆನ್ನಲ್ಲೇ ಬಂಧಿಸಿರುವ ಬೆಳವಣಿಗೆ ನಡೆದಿದೆ. ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಪುತ್ರಿ ಕೆ.ಕವಿತಾ, ರಾಜಧಾನಿಯಲ್ಲಿ ಅಬಕಾರಿ ಪರವಾನಿಗೆ ಪಡೆಯುವ ನಿಟ್ಟಿನಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ 100 ಕೋಟಿ ರೂಪಾಯಿ ಲಂಚ ನೀಡಿರುವುದಾಗಿ ಇ.ಡಿ ಆರೋಪಿಸಿತ್ತು.
ಕಳೆದ ಮಂಗಳವಾರ ಕವಿತಾ ಅವರಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಕಿಕ್ ಬ್ಯಾಕ್ ಆರೋಪದಲ್ಲಿ ಮಾರ್ಚ್ 15ರಂದು ಹೈದರಾಬಾದ್ ನ ಬಂಜಾರಾ ಹಿಲ್ಸ್ ನಿವಾಸದಲ್ಲಿ ಕವಿತಾ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು.
ನನ್ನ ಉದ್ದೇಶಪೂರ್ವಕವಾಗಿ ಬಲಿಪಶು ಮಾಡಲಾಗಿದೆ. ರಾಜಕೀಯ ಮತ್ತು ವೈಯಕ್ತಿಕ ಜೀವನದ ಮೇಲೆ ಟಾರ್ಗೆಟ್ ಮಾಡಲಾಗಿದ್ದು, ನನ್ನ ಮೊಬೈಲ್ ಫೋನ್ ನಲ್ಲಿದ್ದ ವಿವರಗಳನ್ನು ಎಲ್ಲಾ ಟಿವಿ ಚಾನೆಲ್ ಗಳೂ ಪ್ರಸಾರ ಮಾಡಿವೆ. ಇದು ಕಕ್ಷಿದಾರರ ಖಾಸಗಿತನಕ್ಕೆ ಚ್ಯುತಿ ತಂದಿರುವುದಾಗಿ ಕೆ.ಕವಿತಾ ಪರ ವಕೀಲರು ಕೋರ್ಟ್ ಗೆ ಮಾಹಿತಿ ನೀಡಿರುವುದಾಗಿ ವರದಿ ತಿಳಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.