ಮನೆ ರಾಜ್ಯ ಲೋಕಸಭೆ ಚುನಾವಣೆ: ಏಪ್ರಿಲ್​ 17 ರಂದು ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮನ

ಲೋಕಸಭೆ ಚುನಾವಣೆ: ಏಪ್ರಿಲ್​ 17 ರಂದು ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮನ

0

ಬೆಂಗಳೂರು: ಲೋಕಸಭೆಯ ಮೊದಲ ಹಂತದ ಚುನಾವಣಾ ಪ್ರಚಾರ ಜೋರಾಗಿದ್ದು, ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿ ಏಪ್ರಿಲ್​ 17 ರಂದು ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಲಿದ್ದಾರೆ.

Join Our Whatsapp Group

ಮಂಡ್ಯದಲ್ಲಿ ಮೊದಲ ಬಹಿರಂಗ ಪ್ರಚಾರ ಸಭೆಯಲ್ಲಿ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಪ್ರತಿಷ್ಠೆಯ ಕಣ ಮಂಡ್ಯದಲ್ಲಿ ಪಕ್ಷದ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರ ಪ್ರಚಾರ ಸಭೆಯಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ಅದೇ ದಿನ ಸಂಜೆ ಕೋಲಾರ ಕ್ಷೇತ್ರದಲ್ಲಿ ನಡೆಯಲಿರುವ ಮತ್ತೊಂದು ಪ್ರಚಾರ ಸಭೆ ಹಾಗೂ ರೋಡ್‌ ಶೋದಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ, ಬೆಂಗಳೂರಿನಲ್ಲೂ ರೋಡ್ ಶೋ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಚಾಮರಾಜನಗರ, ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮತಬೇಟೆ: ಇಂದು (ಶುಕ್ರವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರ ಜಿಲ್ಲೆಯಲ್ಲಿ ಮತ ಬೇಟೆ ನಡೆಸಲಿದ್ದಾರೆ. ಕೊಳ್ಳೇಗಾಲ, ನಂಜನಗೂಡು ಹಾಗೂ ಹೆಚ್. ಡಿ. ಕೋಟೆ ತಾಲೂಕುಗಳಲ್ಲಿ ಸಿದ್ದರಾಮಯ್ಯ ಪ್ರಚಾರ ನಡೆಸಲಿದ್ದಾರೆ. ರಾತ್ರಿ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಶನಿವಾರ ಮೈಸೂರಿನ ಕೃಷ್ಣರಾಜ, ಹುಣಸೂರು ಹಾಗೂ ಪರಿಯಾಪಟ್ಟಣ ಮತ್ತಿತರ ಕಡೆ ಪಕ್ಷದ ಅಭ್ಯರ್ಥಿಗಳ ಪರ ಸಿಎಂ ಮತಯಾಚನೆ ನಡೆಸುವರು.