ಬೆಂಗಳೂರು: ಬೆಂಗಳೂರಿನ ಬಾಂಬ್ ಸ್ಫೋಟದ ತನಿಖೆಯನ್ನು ಕಾಂಗ್ರೆಸ್ ನಾಯಕರು, ಸಚಿವರು ತಿರುಚಲು ಯತ್ನಿಸಿದ್ದಾರೆ. ಆದರೆ ಎನ್ಐಎ ತಂಡ ಸೂಕ್ತ ತನಿಖೆ ನಡೆಸಿರುವುದು ಅಭಿನಂದನೀಯ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಯೋತ್ಪಾದಕ ದಾಳಿಯಿಂದ ರಾಜ್ಯದ ಜನರು ಆತಂಕಗೊಂಡಿದ್ದರು. ಆದರೆ ಸೂಕ್ತ ಸಮಯದಲ್ಲೇ ಉಗ್ರರನ್ನು ಬಂಧಿಸಿ ಮುಂದಿನ ಅನಾಹುತಗಳನ್ನು ಎನ್ಐಎ ತಪ್ಪಿಸಿದೆ. ಇದಕ್ಕಾಗಿ ಎನ್ಐಎ ಅಧಿಕಾರಿಗಳಿಗೆ ಅಭಿನಂದಿಸುತ್ತೇನೆ ಎಂದರು.
ಕಾಂಗ್ರೆಸ್ ನಾಯಕರು ಈ ಘಟನೆಯನ್ನು ತಿರುಚುವ ಕೆಲಸ ಮಾಡಿದ್ದರು. ಅಲ್ಪಸಂಖ್ಯಾತರಿಗೆ ನೋವಾದರೆ ಮತಬ್ಯಾಂಕ್ ತಪ್ಪುತ್ತದೆ ಎಂಬ ಕಾರಣಕ್ಕೆ ಪೊಲೀಸರ ಮೇಲೆ ಒತ್ತಡ ಹಾಕಿದ್ದರು. ಇದು ವೈಯಕ್ತಿಕ, ವ್ಯಾಪಾರ ಸಂಬಂಧಿ ದ್ವೇಷ ಎನ್ನುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದರು. ಅದರಂತೆ ಪೊಲೀಸರು ಕೂಡ ನಡೆದುಕೊಂಡರು. ಹಿಂದೆ ಕುಕ್ಕರ್ ಸ್ಪೋಟ ಆದಗಾಲೂ ಮಧ್ಯಪ್ರವೇಶ ಮಾಡಿದ ಡಿ.ಕೆ.ಶಿವಕುಮಾರ್, ನನ್ನ ಬ್ರದರ್ ಎಂದಿದ್ದರು. ರಾಜ್ಯ ಸರ್ಕಾರ ಈ ರೀತಿ ನಿರ್ದೇಶನ ನೀಡಿದ್ದರಿಂದ ಪೊಲೀಸರಿಗೆ ಯಾವುದೇ ಸುಳುಹು ಸಿಗಲಿಲ್ಲ. ಆದರೆ ಎನ್ಐಎ ಬಂದ ಬಳಿಕ ಭಯೋತ್ಪಾದಕ ಚಟುವಟಿಕೆ ಬಯಲಾಗಿದೆ ಎಂದರು.
ಕಾಂಗ್ರೆಸ್ನ ಸಹೋದರಿ ಮಮತಾ ಬ್ಯಾನರ್ಜಿಯವರ ರಾಜ್ಯದಲ್ಲೇ ಭಯೋತ್ಪಾದಕರು ಸಿಕ್ಕಿದ್ದಾರೆ. ಇಲ್ಲಿ ಬ್ರದರ್ಗಳಿದ್ದರೆ, ಅಲ್ಲಿ ಸಿಸ್ಟರ್ ಬಳಿಯೇ ಉಗ್ರರು ಸಿಕ್ಕಿದ್ದಾರೆ. ಭಯೋತ್ಪಾದಕರಿಗೆ ಪಶ್ಚಿಮ ಬಂಗಾಳ ಸುರಕ್ಷಿತ ಸ್ಥಳವಾಗಿದೆ. ಎನ್ಐಎ ತಂಡ ಸಾಯಿ ಪ್ರಸಾದ್ ಎಂಬುವರನ್ನು ತನಿಖೆಗೆ ಕರೆದರೆ ಸಚಿವ ದಿನೇಶ್ ಗುಂಡೂರಾವ್ ಅದನ್ನೇ ಹಿಡಿದುಕೊಂಡು ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದರು. ಸಾಯಿ ಪ್ರಸಾದ್ ಸಾಕ್ಷಿಯಾಗಿ ಹೋಗಿದ್ದು, ಅವರ ವಿವರವನ್ನು ಎಲ್ಲರ ಮುಂದೆ ಕಾಂಗ್ರೆಸ್ನವರು ಬಹಿರಂಗ ಮಾಡಿದ್ದಾರೆ. ದೇಶದ ಬಗ್ಗೆ ಇವರಿಗೆ ಯಾವುದೇ ಕಾಳಜಿ ಇಲ್ಲ. ಲೂಟಿ ಹೊಡೆಯಲು ಇನ್ನೊಂದು ದೇಶ ಕಟ್ಟಬೇಕು ಎಂಬ ಆಶಯ ಇವರದ್ದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಧಾನಸೌಧದಲ್ಲಿ ಪಾಕ್ ಜಿಂದಾಬಾದ್ ಕೂಗಿದ ದೇಶದ್ರೋಹಿ ಘಟನೆಯನ್ನು ಸಚಿವ ಪ್ರಿಯಾಂಕ್ ಖರ್ಗೆ ತಿರುಚಲು ಯತ್ನಿಸಿದ್ದರು. ಕೆಜಿ ಹಳ್ಳಿ, ಡಿಜೆ ಹಳ್ಳಿ ಘಟನೆ ಕೂಡ ಭಯೋತ್ಪಾದಕ ಘಟನೆಯಂತೆಯೇ ಇತ್ತು. ಸಂಪತ್ ರಾಜ್ ಜೈಲಿಗೆ ಹೋಗಿ ಬಂದರೂ ಮಂಡಳಿಯ ಅಧ್ಯಕ್ಷನಾಗಿ ಆಯ್ಕೆ ಮಾಡಿದ್ದಾರೆ. ಆದರೆ ದಲಿತ ಶಾಸಕನ ಮನೆಗೆ ಬೆಂಕಿ ಹಾಕಿದರೂ ಕ್ರಮ ಕೈಗೊಳ್ಳಲಿಲ್ಲ ಎಂದರು.
ಚುನಾವಣೆಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ವೈಯಕ್ತಿಕವಾಗಿ ದಾಳಿ ಮಾಡಲಾಗುತ್ತಿದೆ. ಹಿಟ್ಲರ್, ಸರ್ವಾಧಿಕಾರಿ ಎಂದು ಟೀಕೆ ಮಾಡುವವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು. ಈ ದೇಶದಲ್ಲಿ ರಿಯಲ್ ಹಿಟ್ಲರ್ ಎಂದರೆ ಅದು ಕಾಂಗ್ರೆಸ್ ಮಾತ್ರ. ತುರ್ತು ಪರಿಸ್ಥಿತಿ ಹೇರಿ ಎಲ್ಲರನ್ನೂ ಜೈಲಿಗಟ್ಟುವ ಕೆಲಸವನ್ನು ಇಂದಿರಾಗಾಂಧಿ ಮಾಡಿದ್ದರು. ವಿಶ್ವವೇ ಒಪ್ಪಿಕೊಂಡ ನರೇಂದ್ರ ಮೋದಿಯವರನ್ನು ಹಿಟ್ಲರ್ಗೆ ಹೋಲಿಸುವ ಕಾಂಗ್ರೆಸ್ ಇನ್ನೂ ಬ್ರಿಟಿಷ್ ಮನಸ್ಥಿತಿಯಲ್ಲೇ ಇದೆ ಎಂದರು.
ಸಂವಿಧಾನ ಭಗವದ್ಗೀತೆ
ಬಿಜೆಪಿಯ ಪಾಲಿಗೆ ಸಂವಿಧಾನವು ಭಗವದ್ಗೀತೆಯಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸುತ್ತಾರೆ ಎಂದು ಕಾಂಗ್ರೆಸ್ನವರು ಅಪಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ದುರ್ಬಲವಾಗಿರುವುದರಿಂದ ಅವರಿಗೆ ದುರ್ಬಲ ದೇಶವೇ ಬೇಕಿದೆ. ಭಾರತ ಬಲಿಷ್ಠವಾಗುವುದು ಕಾಂಗ್ರೆಸ್ಗೆ ಬೇಕಿಲ್ಲ ಎಂದು ಆರ್.ಅಶೋಕ ಹೇಳಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.