ಸಿಡ್ನಿ: ವ್ಯಕ್ತಿಯೊಬ್ಬ ಸಿಡ್ನಿಯಲ್ಲಿನ ಶಾಪಿಂಗ್ ಮಾಲ್ ಒಂದರಲ್ಲಿ ಐದು ಜನರನ್ನು ಹತ್ಯೆ ಮಾಡಿದ ಘಟನೆ ಶನಿವಾರ ನಡೆದಿದೆ. ಚೂರಿ ಇರಿತ ಮತ್ತು ಗುಂಡಿನ ದಾಳಿ ನಡೆದ ಕಾರಣ ಬೋಂಡಿ ಬೀಚ್ ಬಳಿಯ ವೆಸ್ಟ್ಫೀಲ್ಡ್ ಬೋಂಡಿ ಜಂಕ್ಷನ್ ನಿಂದ ನೂರಾರು ಜನರನ್ನು ಸ್ಥಳಾಂತರಿಸಲಾಗಿದೆ.
ಸಿಡ್ನಿ ಹೆರಾಲ್ಡ್ ವರದಿಯ ಪ್ರಕಾರ ಇನ್ನು ಎಂಟು ಮಂದಿ ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಆಗಂತುಕನು ಐವರು ಜನರನ್ನು ಚೂರಿಯಿಂದ ಇರಿದು ಕೊಂದು ಹಾಕಿದ್ದಾನೆ. ಆತನನ್ನು ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ದಾಳಿಯು ನಗರದ ಪೂರ್ವ ಉಪನಗರದಲ್ಲಿ ಮಧ್ಯಾಹ್ನ 3:40 ರ ಸುಮಾರಿಗೆ (ಸ್ಥಳೀಯ ಕಾಲಮಾನ) ನಡೆಯಿತು. ಅನೇಕ ಜನರು ಇರಿತಕ್ಕೊಳಗಾದ ವರದಿಗಳ ನಂತರ ಸಂಜೆ 4 ಗಂಟೆಯ ವೇಳೆಗೆ ಆ್ಯಂಬುಲೆನ್ಸ್ ಸೇರಿ ತುರ್ತು ಸೇವೆಗಳು ಧಾವಿಸಿದವು ಎಂದು ವರದಿ ಹೇಳಿದೆ.
ಇರಿತಕ್ಕೆ ಒಳಗಾದವರಲ್ಲಿ ತಾಯಿ ಮತ್ತು ಆಕೆಯ ಒಂಬತ್ತು ತಿಂಗಳ ಮಗು ಸೇರಿದೆ. ಆದರೆ ಇಬ್ಬರು ವ್ಯಕ್ತಿಗಳು ಅವರ ಮೇಲೆ ದಾಳಿ ಮಾಡಲು ಬಂದ ಆಗಂತುಕನ ಹೆಚ್ಚಿನ ಪ್ರಯತ್ನಗಳನ್ನು ವಿಫಲಗೊಳಿಸಿದರು. ಮಗುವಿನ ರಕ್ತಸ್ರಾವವನ್ನು ನಿಲ್ಲಿಸಲು ಅಂಗಡಿಯ ಬಟ್ಟೆಗಳನ್ನು ಬಳಸಿದರು ಎಂದು ವರದಿಯಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.