ಹಾಸನ: ನನ್ನ ಅಳಿಯ ಎಂಬ ಕಾರಣಕ್ಕೆ ಡಾ. ಸಿ ಎನ್ ಮಂಜುನಾಥ್ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಜಯದೇವ ಸಂಸ್ಥೆಯನ್ನು ಇಡೀ ದೇಶದಲ್ಲಿ ಎತ್ತರಕ್ಕೆ ಬೆಳೆಸಿದ ಕೀರ್ತಿ ಅವರದ್ದಾಗಿದೆ. ಅವರು ನಮ್ಮ ಪಕ್ಷದಿಂದಲೇ ಸ್ಪರ್ಧಿಸಬೇಕು ಎಂದು ಪ್ರಧಾನಿ ಮೋದಿ ಮನವಿ ಮಾಡಿದರು. ಆ ಅಣ್ಣ ತಮ್ಮರ (ಡಿಕೆ ಸಹೋದರರ) ದೌರ್ಜನ್ಯ ಏನಿದೆ, ಅದನ್ನು ನಿಲ್ಲಿಸಲೇಬೇಕು ಎಂದು ಮಂಜುನಾಥ್ ರನ್ನು ಕಣಕ್ಕಿಳಿಸಿದ್ದಾರೆ. ಅರ್ಥ ಮಾಡಿಕೊಳ್ಳಿ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಹೇಳಿದರು.
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಮಂಚಿಗನಹಳ್ಳಿ ಗ್ರಾಮದಲ್ಲಿ ಪ್ರಜ್ವಲ್ ಪರ ಮತಯಾಚನೆ ಮಾಡಿದ ಅವರು, ಡಿ ಕೆ ಸಹೋದರರ ವಿರುದ್ಧವೂ ವಾಗ್ದಾಳಿ ನಡೆಸಿದರು.
ಶಾಸಕ ಹೆಚ್ ಡಿ ರೇವಣ್ಣ ಅವರನ್ನು ಹೊಗಳಿದ ದೇವೇಗೌಡರು, ರಾಜ್ಯದಲ್ಲಿ ಇಷ್ಟೊಂದು ಕೆಲಸ ಮಾಡುವ ಯಾವುದೇ ಶಾಸಕ ಇಲ್ಲ. ಯಾರಾದರು ಇದ್ದರೆ ಅವರು ನನ್ನ ಮುಂದೆ ಬಂದು ನಿಲ್ಲಬಹುದು. ನೀವು ಹಾಸನದ ಖಾಸಗಿ ಇಂಜಿನಿಯರಿಂಗ್ ಕಾಲೇಜಿಗೆ ಹೋಗಿ ಫೀಜ್ ಕೇಳಿ ಎಷ್ಟು ಹೇಳ್ತಾರೆ ನೋಡಿ. ರೇವಣ್ಣ ತಮ್ಮ ಕ್ಷೇತ್ರದ ಮೊಸಳೆಹೊಸಳ್ಳಿಯಲ್ಲಿ ಒಂದು ಇಂಜಿನಿಯರಿಂಗ್ ಕಾಲೇಜು ಮಾಡಿದರು. ಹಳ್ಳಿಯಲ್ಲಿ ಕಾಲೇಜು ಬೇಡಾ ಎಂದು ಕುಮಾರಸ್ವಾಮಿ ಹೇಳಿದ್ದರು. ಆದರೆ ಹಠ ಹಿಡಿದು ಅಲ್ಲಿ ಕಾಲೇಜು ಸ್ಥಾಪನೆ ಮಾಡಿದರು. ಅಲ್ಲಿ ಕೇವಲ ಐದು ಸಾವಿರಕ್ಕೆ ಸೀಟ್ ಸಿಗುತ್ತದೆ ಎಂದು ಹೇಳಿದರು.
ರೇವಣ್ಣ ದೊಡ್ಡ ವಿದ್ಯಾವಂತ ಅಲ್ಲ. ಅವನು ಕೇವಲ ಎಸ್ಎಸ್ ಎಲ್ಸಿ ಅಷ್ಟೆ. ಹಿಂದೆ ಕಾಂಗ್ರೆಸ್ ಜೊತೆ ಸಮ್ಮಿಶ್ರ ಸರ್ಕಾರ ಮಾಡಿದ್ದಾಗ ಎಷ್ಟು ಷರತ್ತು ಹಾಕಿದ್ದರು. ಕುಮಾರಸ್ವಾಮಿ ಸಾಲಮನ್ನಾ ಮಾಡುತ್ತೇನೆ ಅಂದರೆ ನಮ್ಮ ಯೋಜನೆಗೆ ಮೊದಲು ಹಣ ಇಡಿ ಎಂದರು. ಸಿಎಂ ಸಿದ್ದರಾಮಯ್ಯ ಏಪ್ರಿಲ್ 18 ಕ್ಕೆ ಬರ್ತಾರಂತೆ. ನಾನು ಅವರನ್ನೇ ಫಾಲೋ ಮಾಡ್ತೇನೆ, ಮಾತನಾಡಲಿ ನೊಡೋಣ ಎಂದು ದೇವೇಗೌಡರು ಸವಾಲು ಹಾಕಿದರು.
ನನ್ನ ರಾಜಕೀಯ ಜೀವನದ ಭದ್ರ ಬುನಾದಿ ಹಾಕಿದ್ದು ಈ ದಂಡಿಗನಹಳ್ಳಿ ಹೋಬಳಿ. ಕಾವೇರಿಕೊಳ್ಳದ ಹತ್ತು ಜಿಲ್ಲೆಯ ಜನ ನೀರು ಕುಡಿತೇವೆ. ತಮಿಳುನಾಡಿನ ಸಿಎಂ ಅವರ ಪ್ರಣಾಳಿಕೆಯಲ್ಲಿ ಹಾಕ್ತಾರೆ, ಒಂದು ಗ್ಲಾಸ್ ನೀಡು ಕೊಡಲ್ಲ ಅಂತ. ಹೇಮಾವತಿ, ಕಾವೇರಿ ನೀರು ನೀರು ಬಳಸುವ ಹಾಗಿಲ್ಲ ಎನ್ನುತ್ತಾರೆ. ಈ ಬಗ್ಗೆ ಏಕಾಂಗಿಯಾಗಿ ಪಾರ್ಲಿಮೆಂಟ್ನಲ್ಲಿ ಹೋರಾಟ ಮಾಡಿದೆ. ಅಂದು ಕಾಂಗ್ರೆಸ್ನಲ್ಲಿದ್ದ ಎಸ್ಎಂ ಕೃಷ್ಣ, ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪ, ವೀರಪ್ಪ ಮೊಯ್ಲಿ ಸಚಿವರಾಗಿದ್ದರು. ನಾನು ಪಾರ್ಲಿಮೆಂಟ್ನಲ್ಲಿ ಮಾತನಾಡಿದೆ ಎಂದು ದೇವೇಗೌಡ ಮೆಲುಕು ಹಾಕಿದರು.
ನಾನು ಬಂದಿರುವುದು ಒಬ್ಬ ರೇವಣ್ಣರನ್ನು ಗೆಲ್ಲಿಸಲು ಅಲ್ಲ. ತುಮಕೂರಿಗೆ ಹೋಗ್ತೇನೆ, ಅಲ್ಲಿ ಸೋಮಣ್ಣ ಗೆಲ್ಲಬೇಕು. ಮೈಸೂರಿಗೆ ಹೋಗ್ತೇನೆ ಅಲ್ಲಿ ಮಹರಾಜರು ಗೆಲ್ಲಬೇಕು. ಮಂಡ್ಯಕ್ಕೆ ಹೋಗ್ತೇನೆ ಅಲ್ಲಿ ಕುಮಾರಸ್ವಾಮಿ ಗೆಲ್ಲಬೇಕು ಎಂದು ಅವರು ಹೇಳಿದರು.
ಸ್ಟಾಲಿನ್ ಹೇಳಿದ್ದಾರೆ ಕಾವೆರಿ ನೀರು ಕೊಡಲ್ಲ ಎಂಬುದಾಗಿ. ಈ ಕಾವೇರಿ ನೀರು ಬಳಸುವ ಹತ್ತು ಜಿಲ್ಲೆಯಲ್ಲಿ ನಮ್ಮ ಅಭ್ಯರ್ಥಿ ಗಳು ಗೆಲ್ಲಬೇಕು. ಅವರೊಟ್ಡಿಗೆ ನಾನು ಹೋರಾಟ ಮಾಡ್ತೇನೆ. ನಾಳೆ ನರೇಂದ್ರ ಮೋದಿಯವರು ನನ್ನ ಜೊತೆ ಬಂದು ಕೂಳಿತುಕೊಳ್ಳಬೇಕು ಎಂದಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.