ಹುಣಸೂರು: ಈಶಾನ್ಯ ಆಪ್ರೀಕಾದ ಸೂಡಾನ್ ದೇಶಕ್ಕೆ ವ್ಯಾಪಾರಕ್ಕಾಗಿ ತೆರಳಿದ ಹುಣಸೂರು ತಾಲೂಕಿನ ಪಕ್ಷಿರಾಜಪುರ ಗ್ರಾಮದ ಅಲೆಮಾರಿ ಜನಾಂಗದ (ಹಕ್ಕಿಪಿಕ್ಕಿ) ನಂದಿನಿ ಸಾವನ್ನಪ್ಪಿದ್ದು, ಕುಟುಂಬದಲ್ಲಿ ಆತಂಕ ಮನೆ ಮಾಡಿದೆ.
ನಂದಿನಿಯವರ ಸಾವಿನ ವಿಷಯವನ್ನು ಅಲ್ಲಿರುವ ಇತರೆ ಹಕ್ಕಿಪಿಕ್ಕಿ ಸಮುದಾಯದವರು ದೂರವಾಣಿ ಮೂಲಕ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ಪಕ್ಷಿರಾಜಪುರದಲ್ಲಿ ಮೃತ ನಂದಿಯವರ ಪತಿ. ನಾಲ್ಕು ಹೆಣ್ಣು ಮಕ್ಕಳು. ಒಬ್ಬ ಗಂಡು ಮಗನೊಂದಿಗೆ (ಒಬ್ಬ ಮಗಳು ಅಂಗವಿಕಲಳಾಗಿದ್ದು) ವಾಸವಾಗಿದ್ದರು.
ಇದೀಗ ತಾಯಿಯ ಮೃತ ದೇಹವನ್ನು ಸ್ವದೇಶಕ್ಕೆ ತರಲು ನೆರವಾಗುವಂತೆ ಸರಕಾರಕ್ಕೆ ಮನವಿ ಮಾಡಿದ್ದಾರೆ.
ಗ್ರಾಮದ ನಂದಿನಿ ಸಾವನ್ನಪ್ಪಿರುವ ಬಗ್ಗೆ ಗ್ರಾಮಸ್ಥರು ಮಾಜಿ ಶಾಸಕ ಎಚ್.ಪಿ. ಮಂಜುನಾಥರಿಗೆ ಮಾಹಿತಿ ನೀಡಿ ಕೀನ್ಯಾ ದೇಶದಿಂದ ನಂದಿನಿಯವರ ಶವ ತರಲು ನೆರವಾಗಬೇಕೆಂದು ಮಾಡಿದ ಮನವಿಗೆ ಸ್ಪಂದಿಸಿ. ಮಂಜುನಾಥ ಅವರು ಮುಖ್ಯಮಂತ್ರಿಗಳ ಕಚೇರಿಯ ಹಿರಿಯ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್ ರವರ ಮೂಲಕ ಸೂಡಾನ್ ದೇಶದಲ್ಲಿರುವ ಭಾರತದ ರಾಯಬಾರಿ ಕಚೇರಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ನಂದಿನಿಯವರ ಶವವನ್ನು ಸ್ವದೇಶಕ್ಕೆ ತರಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದ್ದು. ಏ17 ರಂದು ಹುಣಸೂರಿಗೆಬರುವ ನಿರೀಕ್ಷೆ ಇದೆ ಎಂದು ಜಿಲ್ಲಾ ಎಸ್.ಸಿ.ಎಸ್.ಟಿ.ಜಾಗೃತಿ ಸಮಿತಿ ಸದಸ್ಯ ನೇರಳಕುಪ್ಪೆ ಮಹದೇವ್ ಮಾಹಿತಿ ನೀಡಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.