ಶಿವಮೊಗ್ಗ: 63 ಸಾವಿರ ಎಫ್ ಡಿ ಹಣ ನೀಡಲು 40 ಸಾವಿರ ರೂ ಲಂಚ ಪಡೆಯುವಾಗ ವಿಶ್ವವಿದ್ಯಾಲಯದ ಎಇಇ ಹಾಗೂ ಅಕೌಂಟೆಂಟ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ, ವಿಜ್ಞಾನಗಳ ವಿಶ್ವವಿದ್ಯಾಲಯದ ಎಇಇ ಲೋಹಿತ್ ಹಾಗೂ ಅಕೌಂಟೆಟ್ ಗಿರೀಶ್ ಎಂಬುವರು ಲೋಕಾಯುಕ್ತ ಬಲೆಗೆ ಬಿದ್ದವರು.
ಸಾಗರ ತಾಲೂಕು ಇರುವಕ್ಕಿಯ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವ್ಯಾಪ್ತಿಯ ಹಿರಿಯೂರಿನ ಇಲಾಖೆಯ ಇಬ್ಬರು ಅಧಿಕಾರಿಗಳು ಕೆ.ವಿ.ಕೆ ಜಬ್ಬೂರ್ ಫಾರ್ಮ್ ನ ಆಡಳಿತ ವಿಭಾಗದ ಕಚೇರಿಯ ಮೇಲ್ಛಾವಣಿಯನ್ನು ಶಿವಮೊಗ್ಗದ ವಿದ್ಯಾನಗರದ ನಿವಾಸಿ ಗುತ್ತಿಗೆದಾರರಾದ ಸುನೀಲ್ ಎಂಬುವರು ನಿರ್ಮಾಣ ಮಾಡಿದ್ದರು. ಸುನೀಲ್ ಅವರು 3,59,331 ರೂಗಳಿಗೆ ಕಾಮಗಾರಿ ನಡೆಸಿದ್ದರು.
ಈ ಕಾಮಗಾರಿಗಾಗಿ ಎಫ್ ಡಿ ಹಣವನ್ನಾಗಿ 63 ಸಾವಿರ ರೂಗಳನ್ನು ವಿವಿಯಲ್ಲಿ ಇಟ್ಟಿದ್ದೆ. ಕಾಮಗಾರಿ ಮುಗಿದ ಕಾರಣಕ್ಕೆ ಎಫ್ ಡಿ ಹಣವನ್ನು ವಾಪಸ್ ಕೇಳಲು ಬಂದಾಗ ವಿವಿಯ ಎಇಇ ಲೋಹಿತ್ ಅವರು 40 ಸಾವಿರ ರೂ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಲೋಕಾಯುಕ್ತ ಪೊಲೀಸರಿಗೆ ಸುನೀಲ್ ದೂರು ನೀಡಿದ್ದರು. ಈ ದೂರಿನ ಮೇರೆಗೆ 40 ಸಾವಿರ ರೂ ಲಂಚ ಪಡೆಯುವಾಗ ದಾಳಿ ನಡೆಸಲಾಗಿದೆ.
40 ಸಾವಿರ ರೂ ಲಂಚ ಪಡೆಯುವಾಗ ಲೋಕಾಯುಕ್ತ ಅಧೀಕ್ಷಕರಾದ ಮಂಜುನಾಥ್ ಚೌಧರಿ ಹಾಗೂ ಉಪ ಅಧೀಕ್ಷಕರಾದ ಉಮೇಶ್ ಈಶ್ವರ್ ನಾಯಕ್ ಅವರ ಮಾರ್ಗದರ್ಶನದಲ್ಲಿ ನೀರಿಕ್ಷಕರಾದ ಪ್ರಕಾಶ್, ವೀರಭದ್ರಪ್ಪ ದಾಳಿ ನಡೆಸಿದ್ದಾರೆ.
ದಾಳಿಯ ವೇಳೆ ಸಿಬ್ಬಂದಿ ಯೋಗೇಶ್, ಮಹಾಂತೇಶ್ ಸೇರಿದಂತೆ ಇತರ ಸಿಬ್ಬಂದಿ ಹಾಜರಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.