ಬೆಂಗಳೂರು: ಡಾಲಿ ಧನಂಜಯ ಅಭಿನಯದ ಬಹು ನಿರೀಕ್ಷಿತ ʼಉತ್ತರಕಾಂಡʼ ಚಿತ್ರತಂಡಕ್ಕೆ ಹೊಸ ಸದಸ್ಯೆಯ ಸೇರ್ಪಡೆಯಾಗಿದೆ.
ಕೆಆರ್ಜಿ ಬ್ಯಾನರ್ ನಲ್ಲಿ ಬರುತ್ತಿರುವ ʼಉತ್ತರಕಾಂಡʼ ಸಿನಿಮಾ ತಂಡಕ್ಕೆ ಕಳೆದ ಕೆಲ ದಿನಗಳ ಹಿಂದೆ ಮೋಹಕ ತಾರೆ ರಮ್ಯಾ ಶಾಕ್ ನೀಡಿದ್ದರು. ʼಉತ್ತರಕಾಂಡʼ ಮೂಲಕ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಬಹು ಸಮಯದ ಬಳಿಕ ಬಣ್ಣದ ಲೋಕಕ್ಕೆ ನಟಿಯಾಗಿ ಕಂಬ್ಯಾಕ್ ಮಾಡುತ್ತಾರೆ ಎನ್ನಲಾಗುತ್ತಿತ್ತು. ಮುಹೂರ್ತದಲ್ಲೂ ಭಾಗಿಯಾಗಿದ್ದ ಚಿತ್ರದಿಂದ ಹಿಂದೆ ಸರಿದಿದ್ದು ಅಪಾರ ಅಭಿಮಾನಿಗಳಿಗೆ ನಿರಾಸೆಯಾಗಿದೆ.
“ಡೇಟ್ಸ್ ಇಲ್ಲದ ಕಾರಣ ನಾನು ‘ಉತ್ತರಕಾಂಡ’ ಚಿತ್ರದಲ್ಲಿ ಕೆಲಸ ಮಾಡುತ್ತಿಲ್ಲ. (ಸಿನಿಮಾ ಹಾಗೂ ರಾಜಕೀಯದ ಕೆಲಸಗಳನ್ನು ನಾನು ಸದ್ಯಕ್ಕೆ ನಿಲ್ಲಿಸಿದ್ದೇನೆ) ಚಿತ್ರತಂಡಕ್ಕೆ ಶುಭವಾಗಲಿ” ಎಂದು ಹಾರೈಸಿದ್ದರು.
ರಮ್ಯಾ ಅವರ ಬದಲಿಗೆ ಯಾರು ಬರುತ್ತಾರೆ ಎನ್ನುವ ಕುತೂಹಲವಿತ್ತು. ಇದೀಗ ಚಿತ್ರತಂಡಕ್ಕೆ ಈ ಕುತೂಹಲಕ್ಕೆ ತೆರೆ ಎಳೆದಿದೆ. ಇತ್ತೀಚೆಗೆ ʼಟೋಬಿʼ, ʼಸಪ್ತ ಸಾಗರದಾಚೆ ಎಲ್ಲೂ(ಸೈಡ್ -ಬಿ) ಸಿನಿಮಾದಲ್ಲಿ ನಟಿಸಿ ಗಮನ ಸೆಳೆದಿರುವ ಚೈತ್ರಾ ಜೆ ಆಚಾರ್ ʼಉತ್ತರಕಾಂಡʼ ತಂಡ ಸೇರಿಕೊಂಡಿದ್ದಾರೆ.
ರೋಹಿತ್ ಪದಕಿ ನಿರ್ದೇಶನದ ʼಉತ್ತರಕಾಂಡʼ ಸಿನಿಮಾದಲ್ಲಿ ಚೈತ್ರಾ ಜೆ ಆಚಾರ್ ʼಲಚ್ಚಿʼ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಾತ್ರದ ಪೋಸ್ಟರ್ ನ್ನು ಚಿತ್ರತಂಡ ರಿಲೀಸ್ ಮಾಡಿದೆ.
ರಗಡ್ ಲುಕ್ ವುಳ್ಳ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದು, ರಕ್ತದ ಕಲೆಯನ್ನು ಅವರ ಮೈ ಮೇಲಿರುವುದು ಪೋಸ್ಟರ್ ನಲ್ಲಿ ಗೋಚರವಾಗಿದೆ.
ಉತ್ತರ ಕರ್ನಾಟಕದಲ್ಲಿ ಚಿತ್ರದ ಚಿತ್ರೀಕರಣ ಆರಂಭಗೊಂಡಿದೆ ಎನ್ನಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.