ಚಂಡೀಗಢ: ಪಂಜಾಬ್ ನ ನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಆಮ್ ಆದ್ಮಿ ಪಕ್ಷ (ಎಎಪಿ) ಮಂಗಳವಾರ ಅಭ್ಯರ್ಥಿಗಳನ್ನು ಘೋಷಿಸಿದೆ.
ಜಲಂಧರ್ ಮೀಸಲು ಕ್ಷೇತ್ರದಿಂದ ಮಾಜಿ ಶಾಸಕ ಪವನ್ ಕುಮಾರ್ ಟಿನು ಅವರನ್ನು ಕಣಕ್ಕಿಳಿಸಿದ್ದು, ಜೊತೆಗೆ ಮೂವರು ಹಾಲಿ ಶಾಸಕರಿಗೆ ಪಕ್ಷ ಟಿಕೆಟ್ ನೀಡಿದೆ.
ಫಿರೋಜ್ಪುರದಿಂದ ಜಗದೀಪ್ ಸಿಂಗ್ ಕಾಕಾ ಬ್ರಾರ್, ಗುರುದಾಸಪುರದಿಂದ ಅಮನ್ಶೇರ್ ಸಿಂಗ್ ಕಲ್ಸಿ ಮತ್ತು ಲುಧಿಯಾನದಿಂದ ಅಶೋಕ್ ಪರಾಶರ್ ಪಪ್ಪಿ ಸ್ಪರ್ಧಿಸಲಿದ್ದಾರೆ. ಈ ಬಗ್ಗೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಜಗದೀಪ್ ಸಿಂಗ್ ಮುಕ್ತಸರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದರೆ, ಅಮನ್ಶೇರ್ ಬಟಾಲಾ ಕ್ಷೇತ್ರದ ಶಾಸಕರಾಗಿದ್ದಾರೆ. ಇನ್ನು ಅಶೋಕ್ ಪರಾಶರ್ ಲೂಧಿಯಾನ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಟಿನು ಇತ್ತೀಚೆಗಷ್ಟೇ ಶಿರೋಮಣಿ ಅಕಾಲಿ ದಳವನ್ನು ತೊರೆದು ಎಎಪಿ ಸೇರಿದ್ದರು.
ಈ ಘೋಷಣೆಯೊಂದಿಗೆ ಎಎಪಿ ಪಂಜಾಬ್ನ ಎಲ್ಲಾ 13 ಸಂಸದೀಯ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ವಿರೋಧ ಪಕ್ಷಗಳ ಕೂಟ ‘ಇಂಡಿಯಾ’ದ ಭಾಗವಾಗಿರುವ ಎಎಪಿ ಪಂಜಾಬ್ನಲ್ಲಿ ಸ್ವಂತವಾಗಿ ಸ್ಪರ್ಧಿಸುತ್ತಿದೆ.
ಪಂಜಾಬ್ ನ 13 ಲೋಕಸಭಾ ಸ್ಥಾನಗಳಿಗೆ ಜೂನ್ 1 ರಂದು ಕೊನೆಯ ಹಂತದಲ್ಲಿ ಮತದಾನ ನಡೆಯಲಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.