ಮನೆ ಸುದ್ದಿ ಜಾಲ ಸಾಧಕರಿಗೆ ಶ್ರೀ ಬಸವ ವಿಭೂಷಣ, ಬಸವ ಭೂಷಣ ಪ್ರಶಸ್ತಿ ಪ್ರದಾನ

ಸಾಧಕರಿಗೆ ಶ್ರೀ ಬಸವ ವಿಭೂಷಣ, ಬಸವ ಭೂಷಣ ಪ್ರಶಸ್ತಿ ಪ್ರದಾನ

0

ಮೈಸೂರು (Mysuru)- ವಿವಿಧ ಕ್ಷೇತ್ರಗಳ 7 ಮಂದಿ ಸಾಧಕರುಗಳಿಗೆ ಶ್ರೀ ಬಸವ ವಿಭೂಷಣ, ಶ್ರೀ ಬಸವ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ನಗರದ ಕೃಷ್ಣಮೂರ್ತಿಪುರಂನ ನಮನ ಕಲಾಮಂಟಪದಲ್ಲಿ ಸುವರ್ಣ ಬೆಳಕು ಫೌಂಡೇಶನ್ ಹಾಗೂ ಶ್ರೀ ಬಸವೇಶ್ವರ ಸಾಂಸ್ಕೃತಿಕ ಪ್ರತಿಷ್ಠಾನ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಸೋಮಶೇಖರ ಇಮ್ರಾಪುರ ಅವರಿಗೆ ಶ್ರೀ ಬಸವ ವಿಭೂಷಣ ಹಾಗೂ ಪ್ರಕಾಶ್ ಜಿಎಸ್ ಹಳ್ಳಿ, ಕಿರಣ್ ಸಿಡ್ಲೆಹಳ್ಳಿ, ಮಲ್ಲೇಶ್, ಶ್ರೀಧರ್, ಅಂಬಿಕಾ, ಸ್ನೇಕ್ ಪ್ರಶಾಂತ್ ಇವರುಗಳಿಗೆ ಶ್ರೀ ಬಸವ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಹಿರಿಯ ಸಮಾಜ ಸೇವಕ ಡಾ.ಕೆ. ರಘುರಾಮ್ ವಾಜಪೇಯಿ ಮಾತನಾಡಿ, ಬಸವಣ್ಣನವರ ತತ್ವ ಸಿದ್ಧಾಂತಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಪಡೆದುಕೊಂಡಿವೆ ಎಂದು ಬಣ್ಣಿಸಿದರು.

ಕಾರ್ಯಕ್ರಮವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್‌ ಅವರು ಉದ್ಘಾಟಿಸಿದರು. ಶ್ರೀ ಸೋಮಶೇಖರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಜ್ಯ ಮುಕ್ತ ಕವಿ ಪರಿಷತ್ ಅಧ್ಯಕ್ಷ ಮುತ್ತುಸ್ವಾಮಿ, ಹಿಮಾಲಯ ಪ್ರತಿಷ್ಠಾನದ ಅಧ್ಯಕ್ಷ ಅನಂತು, ಸುವರ್ಣ ಬೆಳಕು ಫೌಂಡೇಶನ್ ಅಧ್ಯಕ್ಷ ಮಹೇಶ್ ನಾಯಕ್, ಶ್ರೀ ಬಸವೇಶ್ವರ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಬಸವರಾಜೇಂದ್ರ ಸ್ವಾಮಿ, ಕವಿ ಎನ್.ವಿ. ರಮೇಶನ್, ಯುವ ಬರಹಗಾರ ಬಿ.ಆರ್.ಮಂಜುನಾಥ್, ಹರ್ಷವರ್ಧನ ಮುಂತಾದವರು ಉಪಸ್ಥಿತರಿದ್ದರು.