ಮನೆ ರಾಜ್ಯ ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

0

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಕಲೆಯ ಪೂಜೆ ಮಾಡಿದ್ದ ದ್ವಾರಕೀಶ್‌ ಇನ್ನು ನೆನಪಾಗಿ ಮಾತ್ರ ಉಳಿದಿದ್ದಾರೆ. ಬುಧವಾರ(ಏ.17 ರಂದು) ಸಕಲ ಪೊಲೀಸ್ ಗೌರವಗಳೊಂದಿಗೆ ಅವರ ಅಂತಿಮ ವಿಧಿ ವಿಧಾನ ನೆರವೇರಿತು.

Join Our Whatsapp Group

ಚಾಮರಾಜಪೇಟೆಯ ಟಿಆರ್ ಮಿಲ್‌ನ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿತು. ಅವರ ಪುತ್ರರ ಸಮ್ಮುಖದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನೆರವೇರಿತು.

ಅವರ ಹಿರಿಯ ಪುತ್ರ ಸಂತೋಷ್ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ ವೇಳೆ ಕುಟುಂಬದವರು, ಆಪ್ತರು ಹಾಗೂ ಕನ್ನಡ ಚಿತ್ರರಂಗದ ಕಲಾವಿದರು ಹಾಜರಿದ್ದರು. ಅಂತಿಮ ಸಂಸ್ಕಾರಕ್ಕೂ ಮೊದಲು ಪೊಲೀಸರು ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವವಂದನೆ ನೀಡಲಾಗಿದೆ. ‌

ಕನ್ನಡ ಸಿನಿಮಾರಂಗಕ್ಕೆ ಅಪಾರ ಸೇವೆಯನ್ನು ನೀಡಿದ್ದ ದ್ವಾರಕೀಶ್‌ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಅಭಿಮಾನಿಗಳು ಹಾರೈಸಿದ್ದಾರೆ.