ಮೈಸೂರು: ಕೌಟುಂಬಿಕ ಕಲಹದಿಂದ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಹಾಡಹಗಲೇ ಕೊಲೆ ಮಾಡಿದ ಘಟನೆ ವರದಿಯಾಗಿದೆ.
ನಗರದ ಸರ್ಧಾರ್ ವಲ್ಲಭಬಾಯ್ ಪಟೇಲ್ ನಗರ ವೃತ್ತದ ಬಳಿ (ನಾಡನಹಳ್ಳಿ ಗೇಟ್ ) ಬಳಿ ಈ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಶಿಲ್ಪಾ (26) ಮೃತ ಮಹಿಳೆ. ಘಟನೆಗೆ ಸಂಬಂಧಿಸಿದಂತೆ ಆಕೆಯ ಪತಿ ಮಹೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮಹೇಶ್- ಶಿಲ್ಪಾ ದಂಪತಿ ಮೂಲತಃ ಚಾಮರಾಜನಗರ ಜಿಲ್ಲೆ, ಸಂತೇಮರಹಳ್ಳಿ ಸಮೀಪದ ನವಿಲೂರಿನವರು. ಈ ದಂಪತಿಗೆ 6 ಹಾಗೂ 4 ವರ್ಷದ ಇಬ್ಬರು ಮಕ್ಕಳಿದ್ದಾರೆ. ಪತಿ ಮಹೇಶ್, ಜೂಜಿನ ಚಟಕ್ಕೆ ಬಿದ್ದು ಸಾಲ ಮಾಡಿಕೊಂಡಿದ್ದ. ಈ ಕಾರಣಕ್ಕೆ ಪತಿ-ಪತ್ನಿ ನಡುವೆ ಜಗಳ ನಡೆಯುತ್ತಿತ್ತು. ಸೋಮವಾರ ಸಹ ಇದೇ ಕೌಟುಂಬಿಕ ಕಲಹದ ಸಲುವಾಗಿ ಮಡದಿ ಶಿಲ್ಪಾಳನ್ನು ಮಚ್ಚಿನಿಂದ ಕೊಚ್ಚಿ ಹಲ್ಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದ. ಶಿಲ್ಪಾ ರ ಕುತ್ತಿಗೆಗೆ ಮಚ್ಚಿನಿಂದ ಏಳೆಂಟು ಬಾರಿ ಕೊಚ್ಚಿದ್ದರಿಂದ ಆಕೆ ನಿತ್ರಾಣಗೊಂಡು ರಕ್ತದ ಮಡುವಿನಲ್ಲಿದ್ದರು.
ವಿಷಯ ತಿಳಿಯುತ್ತಿದ್ದಂತೆ ಆಲನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ರಕ್ತದ ಮಡುವಿನಲ್ಲಿದ್ದ ಶಿಲ್ಪರನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟರು.
ಘಟನೆಗೆ ಸಂಬಂಧಿಸಿದಂತೆ ಮಡದಿ ಹತ್ಯೆ ಮಾಡಿ ಪರಾರಿಯಾಗಿದ್ದ ಪತಿ ಮಹೇಶ್ ನನ್ನು ಆಲನಹಳ್ಳಿ ಠಾಣೆ ಇನ್ಸ್ ಪೆಕ್ಟರ್ ಸ್ವರ್ಣ ಮತ್ತು ಸಿಬ್ಬಂದಿ ಘಟನೆ ನಡೆದ ದಿನವೇ ಬಂಧಿಸುವಲ್ಲಿ ಯಶಸ್ವಿಯಾಗಿ, ಆರೋಪಿ ಮಹೇಶ್ ನನ್ನು ಜೈಲಿಗಟ್ಟಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.