ಮನೆ ರಾಜ್ಯ ತುಮಕೂರು: ರಾಮನವಮಿ ಪಾನಕ, ಮಜ್ಜಿಗೆ ಸೇವಿಸಿ 45 ಜನ ಅಸ್ವಸ್ಥ

ತುಮಕೂರು: ರಾಮನವಮಿ ಪಾನಕ, ಮಜ್ಜಿಗೆ ಸೇವಿಸಿ 45 ಜನ ಅಸ್ವಸ್ಥ

0

ತುಮಕೂರು: ರಾಮ ನವಮಿಯಂದು ಮಜ್ಜಿಗೆ ಹಾಗೂ ಪಾನಕ ಸೇವಿಸಿದ್ದ 45 ಜನರು ಅಸ್ವಸ್ಥರಾದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

Join Our Whatsapp Group

ಸುಬ್ರಹ್ಮಣ್ಯ ದೇಗುಲದಲ್ಲಿ ನಿನ್ನೆ(ಏ.17) ಮಜ್ಜಿಗೆ, ಪಾನಕವನ್ನ ಗ್ರಾಮಸ್ಥರು ಸೇವಿಸಿದ್ದರು. ಬಳಿಕ ಮಧ್ಯರಾತ್ರಿಯಿಂದ ವಾಂತಿ-ಭೇದಿ ಶುರುವಾಗಿದೆ. ಬೆಳಗ್ಗೆ ಎಡೆಯೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದರು.

 ಆದರೆ, ಆರೋಗ್ಯ ಸುಧಾರಿಸದ ಹಿನ್ನೆಲೆ ಕುಣಿಗಲ್ ತಾಲೂಕು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.