ಬೆಂಗಳೂರು: ಡಾಲಿ ಧನಂಜಯ ಅವರ ʼಉತ್ತರಕಾಂಡʼ ಸಿನಿಮಾದ ಬಗ್ಗೆ ನಿರೀಕ್ಷೆಗಳು ಹೆಚ್ಚಾಗಿದೆ. ದಿನಕಳೆದಂತೆ ಹೊಸ ಹೊಸ ಅಪ್ಡೇಟ್ ಗಳು ಚಿತ್ರತಂಡದಿಂದ ಬರುತ್ತಿದೆ.
ಕಳೆದ ವರ್ಷ ಸಿನಿಮಾದ ಮುಹೂರ್ತ ನಡೆದಿತ್ತು. ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಅವರು ಈ ಸಿನಿಮಾದ ಮೂಲಕ ಕಂಬ್ಯಾಕ್ ಮಾಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ರಮ್ಯಾ ಅವರು ಡೇಟ್ ಹೊಂದಿಕೆಯಾಗದ ಕಾರಣ ʼಉತ್ತರಕಾಂಡʼದಿಂ ಹೊರ ಹೋಗಿದ್ದಾರೆ.
ರೋಹಿತ್ ಪದಕಿ ನಿರ್ದೇಶನದ ಈ ಸಿನಿಮಾದಲ್ಲಿ ದೊಡ್ಡ ಪಾತ್ರವರ್ಗ ಇರಲಿದೆ. ಒಂದೊಂದೇ ಪಾತ್ರಗಳ ಪರಿಚಯವನ್ನು ಚಿತ್ರತಂಡ ಮಾಡುತ್ತಿದೆ. ಇದೀಗ ಕಾಲಿವುಡ್ ಹಾಗೂ ಟಾಲಿವುಡ್ ಸಿನಿಮಾರಂಗದಲ್ಲಿ ಖ್ಯಾತಿಯನ್ನು ಗಳಿಸಿರುವ ನಟಿ ಐಶ್ವರ್ಯಾ ರಾಜೇಶ್ ʼಉತ್ತರಕಾಂಡʼ ತಂಡಕ್ಕೆ ಸೇರಿಕೊಂಡಿದ್ದಾರೆ. ಆ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ.
ಐಶ್ವರ್ಯ ರಾಜೇಶ್, ಉತ್ತರಕಾಂಡದಾಗ “ದುರ್ಗಿ” ಎಂದು ಅವರ ಪಾತ್ರದ ಲುಕ್ ನ್ನು ಕೆಆರ್ ಜಿ ರಿಲೀಸ್ ಮಾಡಿದೆ.
ಐಶ್ವರ್ಯ ರಾಜೇಶ್ ಅವರ ಆಯ್ಕೆ ಅಧಿಕೃತವಾಗಿದ್ದು, ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಶಿವರಾಜ್ ಕುಮಾರ್ ಅವರಿಗೆ ಜೋಡಿಯಾಗಿ ಭಾವನಾ ಮೆನನ್ ಅವರು ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಚಿತ್ರ ತಂಡ ಅಧಿಕೃತವಾಗಿ ಹೇಳಿಲ್ಲ.
ಬಹು ನಿರೀಕ್ಷಿತ ʼಉತ್ತರಕಾಂಡʼದಲ್ಲಿ ಮಲಯಾಳಂ ನಟ-ನಿರ್ಮಾಪಕ ವಿಜಯ್ ಬಾಬು, ಚೈತ್ರಾ ಜೆ ಆಚಾರ್, ರಂಗಾಯಣ ರಘು, ಯೋಗರಾಜ್ ಭಟ್, ಗೋಪಾಲಕೃಷ್ಣ ದೇಶಪಾಂಡೆ, ಉಮಾಶ್ರೀ, ಮತ್ತು ದಿಗಂತ್ ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ.
ಸದ್ಯ ವಿಜಯಪುರದಲ್ಲಿ ಸಿನಿಮಾದ ಮೊದಲ ಶೆಡ್ಯೂಲ್ ಚಿತ್ರೀಕರಣಗೊಳ್ಳಲಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.