ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್ ಸಿಐಡಿ ತನಿಖೆಯಿಂದ ನಿರ್ದೋಷಿ ಎಂದು ಸಾಬೀತಾಗಿ ಹೊರಗೆ ಬಂದರೆ, ಅವನಿಗೆ ನಾವೇ ತಕ್ಕ ಶಿಕ್ಷೆ ಕೊಡುತ್ತೇವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದರು.
ಮೃತ ನೇಹಾ ನಿವಾಸಕ್ಕೆ ಮಂಗಳವಾರ ಭೇಟಿ ಕೊಟ್ಟು ಅವಳ ತಂದೆ-ತಾಯಿಗೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಪ್ರಕರಣದ ತನಿಖೆ ಸಿಐಡಿಗೆ ಒಪ್ಪಿಸಿರುವುದು ಸ್ವಾಗತಾರ್ಹ. ಆದರೆ, ರಾಜ್ಯ ಸರ್ಕಾರ ಒತ್ತಡ ಹೇರಿ ತನಿಖೆಯ ದಿಕ್ಕು ತಪ್ಪಿಸಿದರೆ ಅದಕ್ಕೆ ತಕ್ಕಪಾಠ ಅನುಭವಿಸಬೇಕಾಗುತ್ತದೆ. ನಿರ್ದೋಷಿಯಾಗಿ ಫಯಾಜ್ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧರಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಪೊಲೀಸ್ ಇಲಾಖೆ ಸಮರ್ಥವಾಗಿದೆ. ಆದರೆ, ರಾಜಕೀಯ ವ್ಯಕ್ತಿಗಳು ಅಧಿಕಾರಿಗಳನ್ನು ದಾರಿ ತಪ್ಪಿಸುತ್ತಾರೆ. ಅವರ ಕೈಕಟ್ಟದೆ ಸ್ವತಂತ್ರವಾಗಿ ಕೆಲಸ ಮಾಡಲು ಬಿಡಬೇಕು. ಮತ ಬ್ಯಾಂಕ್, ಮುಸ್ಲಿಂ ಓಲೈಕೆಗಳನ್ನು ಬಿಡಬೇಕು. ನೇಹಾಳನ್ನು ವ್ಯವಸ್ಥಿತವಾಗಿ ಕೊಲೆ ಮಾಡಿದ ಪ್ರಕರಣ ಇದಾಗಿದ್ದು, ಅನಗತ್ಯವಾಗಿ ತನಿಖೆ ವಿಳಂಬ ಮಾಡದೆ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕೆಂದು ಒತ್ತಾಯಿಸಿದರು.
ರಾಜ್ಯದಲ್ಲಿ ಲವ್ ಜಿಹಾದ್ ಆಳವಾಗಿ ಬೇರೂರಿದ್ದು, ಇದರಿಂದಾಗಿ ಪದೇ ಪದೇ ಇಂತಹ ಪ್ರಕರಣಗಳು ನಡೆಯುತ್ತಿವೆ. ಜಿಹಾದಿ ಮನಸ್ಥಿತಿಯವರಿಗೆ ಭಯವೇ ಇಲ್ಲದಂತಾಗಿದೆ. ನೇಹಾಗೆ 13 ಬಾರಿ ಚಾಕು ಇರಿದು ಕೊಲೆ ಮಾಡಲಾಗಿದೆ. ಆರೋಪಿ ಫಯಾಜ್ಗೆ ಸೂಕ್ತ ತರಬೇತಿ ನೀಡಿರುವ ಸಂಶಯವಿದ್ದು, ಸಿಐಡಿ ಅಧಿಕಾರಿಗಳು ಈ ಕುರಿತು ಆಳವಾದ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.
ನೇಹಾ ಕೊಲೆ ಪ್ರಕರಣ ಕಾಂಗ್ರೆಸ್ಗೆ ವ್ಯತಿರಿಕ್ತ ಪರಿಣಾಮವನ್ನುಂಟು ಮಾಡುತ್ತಿದೆ ಎಂದು ಅದನ್ನು ಸರಿಪಡಿಸಲು ಮುಸ್ಲಿಂ ಸಮುದಾಯದವರಿಂದ ಸಾಂತ್ವನ, ಪ್ರತಿಭಟನೆ ಮಾಡಿಸಲಾಗುತ್ತಿದೆ. ಅಂಜುಮನ್ ಇಸ್ಲಾಂ ಸಂಸ್ಥೆಯವರಿಗೆ ಅಷ್ಟೊಂದು ಕಳಕಳಿಯಿದಿದ್ದರೆ, ಫಯಾಜ್ ಕುಟುಂಬಕ್ಕೆ ಬಹಿಷ್ಕಾರ ಹಾಕಬೇಕಿತ್ತು. ಈಗಲೂ ಕಾಲ ಮಿಂಚಿಲ್ಲ, ಹಿಂದೂ ಹುಡುಗಿಯರನ್ನು ಪ್ರೀತಿಸಿದರೆ ಬಹಿಷ್ಕಾರ ಹಾಕುತ್ತೇವೆ. ಲವ್ ಜಿಹಾದ್ ನಡೆಸಿದರೆ ಸ್ಮಶಾನದಲ್ಲಿ ಜಾಗ ನೀಡುವುದಿಲ್ಲ. ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಫತ್ವಾ ಹೊರಡಿಸಲಿ. ಅದನ್ನು ಬಿಟ್ಟು ನಾಟಕವಾಡುವುದು ಬೇಡವೆಂದು ಆಕ್ರೋಶ ವ್ಯಕ್ತಪಡಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.