ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26ರಂದು ಶುಕ್ರವಾರ ನಡೆಯಲಿದೆ.
ಆ ದಿನ ಮತದಾನ ಮಾಡಿ ಅದಕ್ಕೆ ಸಂಬಂಧಿಸಿದ ಪುರಾವೆಗಳನ್ನು ತೋರಿಸಿದವರಿಗೆ ಉಚಿತವಚವಾಗಿ ಆಹಾರ ನೀಡಲು ಬೃಹತ್ ಬೆಂಗಳೂರು ಹೊಟೇಲ್ ಅಸೋಸಿಯೇಷನ್ನ ಸದಸ್ಯರಿಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ.
ಈ ವಿಚಾರವಾಗಿ ಹೈಕೋರ್ಟ್ ಮಂಗಳವಾರ ಮಧ್ಯಂತರ ಆದೇಶ ನೀಡಿದೆ. ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಬೆಂಗಳೂರಿನ ಕೆಲವು ಹೋಟೆಲ್ಗಳು ಕಳೆದ ವರ್ಷ ವಿಧಾನಸಭೆ ಚುನಾವಣೆ ವೇಳೆಯೂ ಇದೇ ರೀತಿಯ ಪ್ರಯತ್ನ ಮಾಡಿದ್ದವು.
ಹೋಟೆಲ್ಗಳ ಸಂಘ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಮಧ್ಯಂತರ ಆದೇಶ ನೀಡಿದ್ದಾರೆ.
ಅರ್ಜಿದಾರರು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಬಾರದು ಎಂಬ ಷರತ್ತಿನೊಂದಿಗೆ, ಅರ್ಜಿದಾರರ ಸಂಘ ಮತ್ತು ಅದರ ಸದಸ್ಯರು 2024 ರ ಏಪ್ರಿಲ್ 26, ರಂದು ಬೆಂಗಳೂರಿನಲ್ಲಿ ಮತದಾರರಿಗೆ ಉಚಿತ ಆಹಾರವನ್ನು ವಿತರಿಸಲು ಅನುಮತಿಸಲಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.
ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿದ್ದು ಈ ಕೆಲಸ ಮಾಡುತ್ತಿಲ್ಲ. ಮತ ಚಲಾಯಿಸಿದವರಿಗೆ ಮಾತ್ರ ಈ ರೀತಿಯ ಉಚಿತ ಆಹಾರ ನೀಡಲಾಗುತ್ತದೆ ಎಂದು ಅರ್ಜಿದಾರರು ಹೈಕೋರ್ಟ್ ಗೆ ಸಲ್ಲಿಸಿದ್ದ ಮನವಿಯಲ್ಲಿ ಉಲ್ಲೇಖಿಸಿದ್ದರು.
ಬೆಂಗಳೂರು ನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಕಡಿಮೆ ಮತದಾನವಾಗುತ್ತಿದೆ. ಹೀಗಾಗಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಮಾತ್ರ ಈ ವಿಧಾನವನ್ನು ಅನುಸರಿಸುತ್ತಿದ್ದೇವೆ. ಕಳೆದ ವರ್ಷ ವಿಧಾನಸಭಾ ಚುನಾವಣೆಯ ವೇಳೆ ಉಚಿತ ಆಹಾರ ನೀಡಲಾಗಿತ್ತು. ಆಗಲೂ ನಮ್ಮ ವಿರುದ್ಧ ಯಾವುದೇ ನಿಯಮ ಉಲ್ಲಂಘನೆಯ ದೂರುಗಳು ದಾಖಲಾಗಿಲ್ಲ ಎಂದು ಅರ್ಜಿದಾರರು ಕೋರ್ಟ್ ಗೆ ತಿಳಿಸಿದ್ದರು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.