ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹತ್ಯೆಯಾಗಿ ವಾರವೇ ಕಳೆದಿದೆ. ನಿನ್ನೆ ನೇಹಾ ನಿವಾಸಕ್ಕೆ ತೆರಳಿದ ಸಿಎಂ ಸಿದ್ದರಾಮಯ್ಯ, ಪೋಷಕರಿಗೆ ಸಾಂತ್ವನ ಹೇಳಿದ್ದರು. ಜೊತೆಗೆ ಆರೋಪಿಗೆ ಕಠಿಣ ಶಿಕ್ಷೆ ಕೊಡಿಸುವ ಭರವಸೆ ನೀಡಿದ್ದರು.
ಈ ವೇಳೆ ಭದ್ರತೆ ಒದಗಿಸುವಂತೆ ಸಿಎಂಗೆ ನೇಹಾ ತಂದೆ ನಿರಂಜನ ಮನವಿ ಮಾಡಿದ ಬೆನ್ನಲ್ಲೇ ನಗರದ ಬಿಡನಾಳದಲ್ಲಿರುವ ನಿರಂಜನ ಹಿರೇಮಠ ನಿವಾಸಕ್ಕೆ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಜೀವ ಬೆದರಿಕೆಯಿದೆ ಎಂದು ನಿರಂಜನ ಅವರು ದೂರು ನೀಡಿದ್ದರು. ಹೀಗಾಗಿ ಭದ್ರತೆ ಒದಗಿಸುವ ಮೂಲಕ ರಾಜ್ಯ ಸರ್ಕಾರ ಸ್ಪಂದಿಸಿದೆ.
ನಿನ್ನೆ ನೇಹಾ ನಿವಾಸಕ್ಕೆ ಭೇಟಿ ನೀಡಿದ್ದ ಸಿದ್ದರಾಮಯ್ಯ, ನೇಹಾ ತಂದೆ ನಿರಂಜನ್ ಹಾಗೂ ತಾಯಿ ಗೀತಾಗೆ ಸಾಂತ್ವನ ಹೇಳಿದ್ದರು. ಪ್ರಕರಣವನ್ನ ಸಿಐಡಿಗೆ ವಹಿಸಲಾಗಿದೆ. ಆರೋಪಿಗೆ ಘೋರ ಶಿಕ್ಷೆ ಕೊಡಿಸಲು ಪ್ರಯತ್ನಿಸುತ್ತೇನೆ ಎಂದಿದ್ದರು. ಶೀಘ್ರದಲ್ಲಿಯೇ ಡಿಸಿಎಂ ಡಿಕೆ ಶಿವಕುಮಾರ್ ಕೂಡ ನಿರಂಜನ್ ಮನೆಗೆ ಭೇಟಿ ನೀಡಲಿದ್ದಾರೆ.
ಇನ್ನು ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್, ಎಸ್ಪಿ ವೆಂಕಟೇಶ್ ನೇತೃತ್ವದ ತಂಡ ನಿನ್ನೆ ನೇಹಾ ನಿವಾಸಕ್ಕೆ ಭೇಟಿ ನೀಡಿತ್ತು. ಪೋಷಕರಿಂದ ಹೇಳಿಕೆ ಪಡೆದಿತ್ತು. ಈ ವೇಳೆ ಮಾತನಾಡಿದ್ದ ನೇಹಾ ತಂದೆ ನಿರಂಜನ್, ಕೆಲ ದಿನಗಳಿಂದ ನಮಗೆ ಬೆದರಿಕೆ ಇದೆ. ಯಾರ್ಯಾರೋ ಮನೆಗೆ ಬಂದು ವಿಡಿಯೋ ಮಾಡುತ್ತಿದ್ದಾರೆ ಅಂತಾ ಆರೋಪಿಸಿದ್ದರು. ಅಷ್ಟೇ ಅಲ್ಲ ಫಯಾಜ್ ಪ್ರಾಣ ತಗೋತೀನಿ ಅಂತಾ ನನ್ನ ಮಗಳ ಶವದ ಮೇಲೆ ನಾನು ಶಪಥ ಮಾಡಿದ್ದೇನೆ ಎಂದು ಹೇಳಿದ್ದರು.
ಏಪ್ರಿಲ್ 18 ರಂದು ನೇಹಾ ಹತ್ಯೆಯಾಗಿತ್ತು ನಿಜ. ಆದರೆ ಅದಕ್ಕೂ ಐದು ದಿನ ಮುನ್ನವೇ ಚಾಕು ಖರೀದಿಸಿದ್ದ ಫಯಾಜ್, ನೇಹಾ ಮನೆ ಬಳಿ ಓಡಾಡಿದ್ದನಂತೆ. ಏಪ್ರಿಲ್ 18 ರಂದು ಕಾಲೇಜ್ ಬಳಿ ಸ್ಕೂಟಿಯಲ್ಲಿ ಹೋಗಿದ್ದವನು, ರಸ್ತೆ ಕಡೆ ಮುಖ ಮಾಡಿಯೇ ಸ್ಕೂಟಿ ನಿಲ್ಲಿಸಿದ್ದ. ಕೊಲೆ ಬಳಿಕ ಎಸ್ಕೇಪ್ ಆಗಲು ಎಲ್ಲಾ ಪ್ಲ್ಯಾನ್ ಮಾಡಿಕೊಂಡಿದ್ದ ಎನ್ನಲಾಗುತ್ತಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.