ಬಾಗಲಕೋಟೆ: ಕಾಂಗ್ರೆಸ್ ಲೂಟಿಗೆ ಕರ್ನಾಟಕವನ್ನೇ ಎಟಿಎಂ ಮಾಡಿಕೊಂಡಿದೆ. ಆದ್ದರಿಂದ ಕಡಿಮೆ ಸಮಯದಲ್ಲಿ ಖಜಾನೆ ಖಾಲಿ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು.
ಬಾಗಲಕೋಟೆಯಲ್ಲಿ ಸೋಮವಾರ ಬಾಗಲಕೋಟೆ, ವಿಜಯಪುರ ಅಭ್ಯರ್ಥಿಗಳ ಪರವಾಗಿ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಾಸಕರ ನಿಧಿಯೂ ಸಮಯಕ್ಕೆ ಸರಿಯಾಗಿ ಸಿಗುತ್ತಿಲ್ಲ ಎಂದು ಟೀಕಿಸಿದರು.
ಮುಂದಿನ ದಿನಗಳಲ್ಲಿ ಸರ್ಕಾರಿ ನೌಕರರಿಗೂ ವೇತನ ನೀಡಲಾಗದಂತಹ ಸ್ಥಿತಿ ಬರುತ್ತದೆ. ನಿಮ್ಮ ಮಕ್ಕಳು ಉಪವಾಸ ಸಾಯಬೇಕಾದ ಪರಿಸ್ಥಿತಿ ತರುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ವಸೂಲಿ ಗ್ಯಾಂಗ್ ಸರ್ಕಾರ ನಡೆಸುತ್ತಿದೆ. ಖಜಾನೆಗೆ ಹಣ ಬರುತ್ತಿದ್ದಂತೆಯೇ ಲೂಟಿ ಮಾಡಿ ತಮ್ಮ ಖಜಾನೆ ಭರ್ತಿ ಮಾಡಿಕೊಳ್ಳುತ್ತಾರೆ ಎಂದು ಆರೋಪಿಸಿದರು.
ಕೋಟ್ಯಂತರ ಮೊತ್ತದ ಹಗರಣ ಮಾಡುವ ಕನಸನ್ನು ಕಾಂಗ್ರೆಸ್ ನವರು ಕಾಣುತ್ತಿದ್ದಾರೆ. ರಾಜ್ಯ ಲೂಟಿ ಮಾಡುವವರಿಗೆ ಮೇ 7ರಂದು ಶಿಕ್ಷೆ ಆಗಬೇಕಲ್ಲವೇ ಎಂದು ಪ್ರಶ್ನಿಸಿದರು.
ಭಾರತದ ಭವಿಷ್ಯ ಬರೆಯುವ, ವಿಕಸಿತ ಭಾರತ ನಿರ್ಮಾಣ, ಆತ್ಮನಿರ್ಭರ್ ಚುನಾವಣೆ ಇದಾಗಿದೆ. ಭಾರತ ಕೆಲವೇ ವರ್ಷಗಳಲ್ಲಿ ವಿಶ್ವದ ಮೂರನೇ ಆರ್ಥಿಕ ಶಕ್ತಿ ಆಗಲಿದೆ. ಇದನ್ನು ಮಾಡಲು ನಿಮ್ಮ ಒಂದು ಮತ ಆ ಶಕ್ತಿ ನೀಡಲಿದೆ ಎಂದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ, ಬಾಗಲಕೋಟೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ, ವಿಜಯಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಮೇಶ ಜಿಗಜಿಣಗಿ ಇದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.