ಬೆಂಗಳೂರು: ಅಶ್ಲೀಲ ವಿಡಿಯೋಗಳುಳ್ಳ ಪೆನ್ ಡ್ರೈವ್ ಬಹಿರಂಗ ವಿಚಾರಕ್ಕೆ ಸಂಬಂಧಿಸಿ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪಕ್ಷದಿಂದ ಅಮಾನತುಗೊಳಿಸಲು ಶಿಫಾರಸು ಮಾಡಲಾಗಿದೆ. ಅಪರಾಧ ಸಾಬೀತಾದರೆ ನಂತರ ಪಕ್ಷದಿಂದ ಉಚ್ಚಾಟನೆ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.
ಹುಬ್ಬಳ್ಳಿಯಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಕರಣದ ಹಿಂದೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಕುಟುಂಬಕ್ಕೆ ಕಳಂಕ ತರುವಂತೆ ಮಾಡಬೇಕೆಂಬ ಹುನ್ನಾರವಿದೆ. ಹಳೆಯ ಪ್ರಕರಣವನ್ನು ಈಗ ಚುನಾವಣೆ ಸಮಯದಲ್ಲಿ ಮುನ್ನೆಲೆಗೆ ತಂದಿದ್ದಾರೆ. ಈ ಪ್ರಕರಣಕ್ಕೂ ಪ್ರಧಾನಿ ಮೋದಿ ಅವರಿಗೂ ಕಾಂಗ್ರೆಸ್ ನಾಯಕರು ತಳಕು ಹಾಕಿದ್ದಾರೆ. ಇದಕ್ಕೂ ಮೋದಿಗೂ ಏನು ಸಂಬಂಧ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಮಹಿಳೆಯರ ಮೇಲೆ ದೌರ್ಜನ್ಯ ಆಗಿದ್ದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಆಗಲಿ. ಅದನ್ನು ಸ್ವಾಗತಿಸುತ್ತೇವೆ. ಹಾಗೆಂದು ಸಂತ್ರಸ್ತೆಯರು ದೂರು ನೀಡುವ ಮುನ್ನವೇ ಸಿಎಂ ಸಿದ್ದರಾಮಯ್ಯ ತನಿಖೆಗೆ ಆಸಕ್ತಿ ವಹಿಸಿದ್ದು ಹೇಗೆ ಎಂದು ಪ್ರಶ್ನಿಸಿದರು.
ಮೈತ್ರಿಗೆ ಸೋಲು ತರಬೇಕೆಂದು ಕುತಂತ್ರ ಮಾಡಿದ್ದಾರೆ. ಯಾವ ಸಂತ್ರಸ್ತೆಯೂ ದೂರು ಕೊಟ್ಟಿರಲಿಲ್ಲ. ಮಹಿಳಾ ಆಯೋಗದ ಅಧ್ಯಕ್ಷರ ಹೇಳಿಕೆ ಬೆನ್ನಲ್ಲೇ ಎಸ್ಐಟಿ ರಚಿಸಿರೋದಾಗಿ ಸಿಎಂ ಹೇಳಿದ್ದಾರೆ. ಹೆಣ್ಣುಮಗಳ ಕೈಲಿ ಬರೆಸಿಕೊಂಡಿದ್ದಾರೆ. 2012-13 ರಲ್ಲಿ ರೇವಣ್ಣ ಅವರ ಮನೆಯಲ್ಲಿ ಕೆಲಸಕ್ಕೆ ಬಂದಿದ್ದಳು. ಆಗ ನಡೆದ ಘಟನೆಗೆ ಈಗ ಯಾಕೆ ದೂರು ಕೊಟ್ಟರು? ಮೈತ್ರಿಗೆ ಸೋಲು ತರಬೇಕೆಂದು ಕುತಂತ್ರ ಮಾಡಿದ್ದಾರೆ. ದೂರು ನೀಡುವುದಕ್ಕೂ ಮುನ್ನವೇ ಎಸ್ ಐಟಿ ರಚನೆ ಮಾಡಿದ್ದಾರೆ. ಹಿರಿಯ ಪೊಲೀಸ್ ಆಧಿಕಾರಿಗಳು ಹಾಸನದಲ್ಲಿಯೇ ಠಿಕಾಣಿ ಹೂಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.
ಅಶ್ಲೀಲ ವಿಡಿಯೋವನ್ನು ಬಹಿರಂಗ ಮಾಡುವಾಗ ಕನಿಷ್ಠಪಕ್ಷ ಸಂತ್ರಸ್ತೆಯರ ಮುಖವನ್ನೂ ಬ್ಲರ್ ಮಾಡಲಿಲ್ಲ. ಇದರಿಂದಲೇ ಗೊತ್ತಾಗುವುದಿಲ್ಲವೇ ಅವರ ಮಹಿಳಾ ಪರ ಕಳಕಳಿ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು.
ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, 2 ಸಾವಿರ ವಿಡಿಯೋ ಇದೆ ಎನ್ನುತ್ತೀರಿ? ಇದೆಲ್ಲ ಯಾವ ಫ್ಯಾಕ್ಟರಿಯಲ್ಲಿ ಸಿದ್ಧವಾಯ್ತು? ಅಷ್ಟೊಂದು ವಿಡಿಯೋ ಸಿದ್ಧವಾಗಬೇಕಿದ್ದರೆ ಆತ ಸಂಸದನಾಗಿ ಐದು ವರ್ಷ ಅದೇ ಕೆಲಸ ಮಾಡಿದನೋ? ಅನುಮಾನ ಬರುವುದಿಲ್ಲವೇ ಎಂದು ಪ್ರಶ್ನಿಸಿದರು.
ಸಂತ್ರಸ್ತೆಯರ ವಿವರ ಬಹಿರಂಗ ಮಾಡಿ ನಾಳೆ ಅವರಿಗೆ ಏನಾದರೂ ಹೆಚ್ಚು ಕಡಿಮೆ ಆದರೆ ಯಾರು ಹೊಣೆ? ನಾಳೆ ಅವರೇನಾದರೂ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಯಾರು ಹೊಣೆಗಾರರಾಗುತ್ತಾರೆ ಸಿದ್ದರಾಮಯ್ಯನವರೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
ನಿಮ್ಮ ಕುಟುಂಬದಲ್ಲಿ ನಡೆದಿದ್ದ ಆ ದುರ್ಘಟನೆ ವೇಳೆ ಅಂದಿನ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮತ್ತು ಪ್ರಧಾನಿ ಮೋದಿ ಕಾಪಾಡಿದ್ದರಲ್ಲವೇ? ಇದೀಗ ಈ ಘಟನೆಯನ್ನು ಮೋದಿ ಅವರಿಗೆ ಏಕೆ ತಳಕು ಹಾಕುತ್ತೀರಿ? ನಿಮ್ಮ ಕುಟುಂಬದ ಘಟನೆ ನೆನಪಿಟ್ಟುಕೊಳ್ಳಿ ಎಂದು ಕುಮಾರಸ್ವಾಮಿ ಕಿಡಿಕಾರಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.