ಬೆಂಗಳೂರು: ರಾಜ್ಯದಲ್ಲಿ ಮೇ 7ರಂದು ನಡೆಯಲಿರುವ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಅಗತ್ಯ ಸೇವೆಗಳ ಇಲಾಖೆ ಸಿಬ್ಬಂದಿಗೆ ಇಂದಿನಿಂದ ಮೂರು ದಿನಗಳ ಕಾಲ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಲೆನಾಡು, ಕಿತ್ತೂರು ಮತ್ತು ಕಲ್ಯಾಣ ಕರ್ನಾಟಕ ಭಾಗ ಸೇರಿ 14 ಲೋಕಸಭಾ ಕ್ಷೇತ್ರಗಳಲ್ಲಿ ಅಂಚೆ ಮತದಾನ ಕೇಂದ್ರಗಳನ್ನು ತೆರೆಯಲಾಗಿದೆ. ಇಂದಿನಿಂದ ಮೇ 3ರ ವರೆಗೆ ಪ್ರತಿದಿನ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಅಂಚೆ ಮತದಾನ ಮಾಡಬಹುದಾಗಿದೆ.
ಅಗತ್ಯ ಸೇವೆಗಳ ಇಲಾಖೆಗಳಿಗೆ ಸಂಬಂಧಿಸಿದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಳಾಖೆಗಳ ಸಿಬ್ಬಂದಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಭಾರತ ಚುನಾವಣಾ ಆಯೋಗ ಅಂಚೆ ಮತದಾನ ಕೇಂದ್ರಗಳನ್ನು ತೆರೆದಿದೆ. ಅರ್ಹ ಮತದಾರರು ಅಂಚೆ ಮತಪತ್ರಗಳ ಸೌಲಭ್ಯವನ್ನು ಬಳಸಿಕೊಳ್ಳುವಂತೆ ರಾಜ್ಯ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಚುನಾವಣಾ ಆಯೋಗವು ಮೇ 7 ರಂದು ಚುನಾವಣೆ ನಡೆಯಲಿರುವ 14 ಕ್ಷೇತ್ರಗಳಲ್ಲಿ ಮತದಾನಕ್ಕೆ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಇವಿಎಂಗಳನ್ನು ಸಜ್ಜುಗೊಳಿಸಿಕೊಳ್ಳಲಾಗಿದೆ. ಚುನಾವಣಾ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಲಾಗಿದ್ದು, ನಿಯೋಜನೆ ಕಾರ್ಯ ನಡೆದಿದೆ. ಇದಲ್ಲದೆ, ಚುನಾವಣಾ ಆಯೋಗದಿಂದ ಮನೆ, ಮನೆಗೆ ಮತದಾರರ ಚೀಟಿ ಹಂಚುವ ಕಾರ್ಯ ನಡೆದಿದೆ.
ಜೊತೆಗೆ, ಚುನಾವಣಾ ಅಕ್ರಮಗಳ ಮೇಲೆ ನಿಗಾ ಇಡಲು ಪೊಲೀಸ್, ಅಬಕಾರಿ, ಆದಾಯ ತೆರಿಗೆ, ವಾಣಿಜ್ಯ ತೆರಿಗೆ ಇಲಾಖೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಕೇಂದ್ರದಿಂದ ನಿಯೋಜನೆಗೊಂಡಿರುವ ಚುನಾವಣಾ ವೀಕ್ಷಕರು ಆಯಾ ಕ್ಷೇತ್ರಗಳಲ್ಲೇ ಮೊಕ್ಕಾಂ ಹೂಡಿದ್ದಾರೆ.
ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಗಡಿ ಭಾಗಕ್ಕೆ ಹೊಂದಿಕೊಂಡಿರುವ ರಾಯಚೂರು, ಬಳ್ಳಾರಿ, ಬೀದರ್, ಬೆಳಗಾವಿ, ಉತ್ತರ ಕನ್ನಡ ಹಾಗೂ ವಿಜಯಪುರ ಕ್ಷೇತ್ರಗಳಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದೆ. ಕರ್ನಾಟಕಕ್ಕೆ ಹೊಂದಿಕೊಂಡ ಗಡಿ ರಾಜ್ಯದ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ನೀತಿ ಸಂಹಿತೆ ಜಾರಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ. ಮುಕ್ತ, ನ್ಯಾಯಸಮ್ಮತ, ಶಾಂತಿಯುತ ಚುನಾವಣೆ ನಡೆದು, ಅತಿ ಹೆಚ್ಚು ಮತದಾನ ಆಗುವ ನಿರೀಕ್ಷೆಯಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ಧಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.