ಮನೆ ರಾಜ್ಯ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

0

ದಾವಣಗೆರೆ: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ನಾವು ವಿಳಂಬ ಮಾಡಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

Join Our Whatsapp Group

ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಮಹಿಳಾ ಆಯೋಗದಿಂದ ದೂರು ಬಂದ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಇದರಲ್ಲಿ ಯಾವುದೇ ವಿಳಂಬವಾಗಿಲ್ಲ ಎಂದು ಹೇಳಿದ್ದಾರೆ. ಎಸ್ ಐಟಿ ಈ ಬಗ್ಗೆ ತನಿಖೆ ನಡೆಸುತ್ತಿದೆ ಇದರ ಆಧಾರದ ಮೇಲೆ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಬಳಿಕ ಮಾತನಾಡಿದ ಅವರು ದೇಶದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಯಾವ ಮೋದಿ ಅಲೆ ಇಲ್ಲ, ಮೋದಿಯನ್ನು ಬದಲಾವಣೆ ಮಾಡಬೇಕು ಎನ್ನುವ ಗಾಳಿ ಬೀಸುತ್ತಿದೆ ಎಂದು ಹೇಳಿದರು.

ಈಗಾಗಲೇ ರಾಜ್ಯದಲ್ಲಿ 14 ಕ್ಷೇತ್ರದಲ್ಲಿ ಚುನಾವಣೆ ನಡೆದಿದ್ದು ಅದರಲ್ಲೂ ಕಾಂಗ್ರೆಸ್ ಪರವಾದ ಅಲೆ ಇದೆ. ರಾಜ್ಯದ ಜನರಿಗೆ ನೀಡಿದ ಗ್ಯಾರೆಂಟಿ ಯೋಜನೆಗಳಿಂದ ಜನರು ಕಾಂಗ್ರೆಸ್ ಮೇಲೆ ಆಶೀರ್ವಾದ ಮಾಡಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೆಟ್ಡೋಗಿದೆ ಎಂದು ಪ್ರಧಾನಿ ಗಳು ಹೇಳಿದ್ದಾರೆ. ಅದಕ್ಕೆ ನಾನು ಅಂಕಿ ಅಂಶಗಳನ್ನು ಸದನದಲ್ಲಿ ಬಹಿರಂಗ ಪಡಿಸುತ್ತೇನೆ. ಬಿಜೆಪಿ ಅಡಳಿತ ಅವಧಿಯಲ್ಲಿ ಎಷ್ಟರ ಮಟ್ಟಿಗೆ ಕಾನೂನು ಸುವ್ಯವಸ್ಥೇ ಇತ್ತು ಎನ್ನುವುದನ್ನು ತಿಳಿಸುತ್ತೇನೆ ಎಂದು ಹೇಳಿದರು.

ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಆರೋಪಿಯನ್ನು ಕರ್ನಾಟಕ ಪೋಲೀಸರೇ ಸುಳಿವು ಹಿಡಿದು ಬಂಧಿಸಿದ್ದಾರೆ. ನೇಹಾ ಹತ್ಯೆ ಮಾಡಿದ ಅರೋಪಿಯನ್ನು ಒಂದು ಗಂಟೆಯೊಳಗೆ ಬಂಧನ ಮಾಡಿದ್ದೇವೆ. ಕಾನೂನು ಬಾಹಿರವಾಗಿ ಕೃತ್ಯಗಳು ನಡೆದರೆ ಅದರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳುವ ಕೆಲಸ ನಮ್ಮ ಸರ್ಕಾರ ಮಾಡಿದೆ. ಬೆಂಗಳೂರಿನಲ್ಲಿ ಸಾವಿರಾರು ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಕೂಡ ನಾನೇ ಮುಂದು ನಿಂತು ಸುಟ್ಟು ಹಾಕಿಸಿದ್ದೇನೆ ಬಿಜೆಪಿಯವರು ಇದನ್ನೇಲ್ಲ ಅರಿತು ಮಾತಮಾಡಲಿ ಎಂದು ಹೇಳಿದರು.