ಮೈಸೂರು (Mysuru)-ಮುದ್ದು ಕಂದ ಗೌರಿಯ ಅಗಲಿಕೆಯ ನೋವಿನಲ್ಲಿರುವ ಶಾಸಕ ಜಿ.ಟಿ.ದೇವೇಗೌಡ (G.T.Devegowda) ಅವರ ಮನೆಗೆ ಇಂದು ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumarswamy) ಸಾಂತ್ವನ ಹೇಳಿದರು.
ಮೈಸೂರು ತಾಲೂಕಿನ ಗುಂಗ್ರಾಲ್ ಗ್ರಾಮದಲ್ಲಿರುವ ಜಿಟಿಡಿ ನಿವಾಸಕ್ಕೆ ಭೇಟಿ ನೀಡಿದ ಹೆಚ್ಡಿಕೆ ಅವರು, ಜಿ.ಟಿ.ದೇವೇಗೌಡ, ಹರೀಶ್ ಗೌಡ ಹಾಗೂ ಕುಟುಂಬ ವರ್ಗದವರಿಗೆ ಸಾಂತ್ವ ಹೇಳಿ, ಧೈರ್ಯ ತುಂಬಿದರು.
ಆ ಮೂಲಕ ಶಾಸಕ ಜಿಟಿಡಿ ಮನೆಗೆ ಕುಮಾರಸ್ವಾಮಿ ಅವರು ಒಂದೂವರೆ ವರ್ಷದ ಬಳಿಕ ಭೇಟಿ ನೀಡಿದಂತಾಗಿದೆ.
ಈ ಸಂದರ್ಭದಲ್ಲಿ ವಿವಿಧ ಮಠಗಳ ಸ್ವಾಮೀಜಿಗಳು, ಜೆಡಿಎಸ್ ರಾಜ್ಯ ಯುವ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಮಾಜಿ ಶಾಸಕರಾದ ಸಾ.ರಾ.ಮಹೇಶ್, ಪುಟ್ಟರಾಜು, ಅಶ್ವಿನ್ ಕುಮಾರ, ಅನ್ನದಾನಿ, ಕೆ.ಮಹದೇವ್ ಇದ್ದರು.