ಮನೆ ರಾಜಕೀಯ ಆರ್ ಅಶೋಕ ಸಂತ್ರಸ್ತೆಯರಿಗೆ ವಿಶ್ವಾಸ ತುಂಬುವ ಕೆಲಸ ಮಾಡಲಿ: ಡಿ ಕೆ ಶಿವಕುಮಾರ್

ಆರ್ ಅಶೋಕ ಸಂತ್ರಸ್ತೆಯರಿಗೆ ವಿಶ್ವಾಸ ತುಂಬುವ ಕೆಲಸ ಮಾಡಲಿ: ಡಿ ಕೆ ಶಿವಕುಮಾರ್

0

ಕಲಬುರಗಿ: ಅಶೋಕ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಶೋಭಾ ಕರಂದ್ಲಾಜೆ, ಡಿ ವಿ ಸದಾನಂದಗೌಡ, ಸುನೀಲ್ ಕುಮಾರ್, ಸಿಟಿ ರವಿ ಮೊದಲಾದವರನ್ನು ಹಾಸನಕ್ಕೆ ಕರೆದುಕೊಂಡು ಹೋಗಿ ಸಂತ್ರಸ್ತೆಯರ ವಿಳಾಸಗಳನ್ನು ಪತ್ತೆ ಮಾಡಿ ಅವರಲ್ಲಿ ವಿಶ್ವಾಸ ತುಂಬುವ ಪ್ರಯತ್ನ ಮಾಡಲಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

Join Our Whatsapp Group

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ, ಪ್ರಜ್ವಲ್ ರೇವಣ್ಣ ಲೈಂಗಿಕ ದುರಾಚಾರದ ಟೇಪ್ ಗಳಲ್ಲಿ ಕಾಣುವ ಮಹಿಳೆಯರ ಬಗ್ಗೆ ಒಣ ಸಹಾನುಭೂತಿ ವ್ಯಕ್ತಪಡಿಸುತ್ತಿದ್ದಾರೆಯೇ ಹೊರತು ಅವರನ್ನು ಪತ್ತೆ ಮಾಡಿ ಧೈರ್ಯ ತುಂಬುವ ಕೆಲಸ ಮಾಡುತ್ತಿಲ್ಲ. ಒಬ್ಬ ವಿರೋಧ ಪಕ್ಷದ ನಾಯಕನಾಗಿ ಆರ್ ಅಶೋಕ  ಆಡುವ ಮಾತು ಆಶ್ಚರ್ಯ ಹುಟ್ಟಿಸುತ್ತದೆ. ಪ್ರಜ್ವಲ್ ರೇವಣ್ಣಗೆ 2019 ರಲ್ಲಿ ಕಾಂಗ್ರೆಸ್ ಬೆಂಬಲ ನೀಡಿದ್ದು ಸತ್ಯ, ಆದರೆ ಈಗ ಅವರು ಯಾವ ಪಾರ್ಟಿಯ ಬೆಂಬಲದಿಂದ ಸ್ಪರ್ಧೆ ಮಾಡುತ್ತಿದ್ದಾರೆ? ಹೊಣೆಗಾರಿಕೆಯಿಂದ ನುಣುಚಿಕೊಳ್ಳುವುದು ಬೇಡ ಎಂದಿದ್ದಾರೆ.

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿಹೋಗಲು ಕಾಂಗ್ರೆಸ್ ನೆರವಾಗಿದೆ ಅಂತ ವಿಪಕ್ಷಗಳು ಆರೋಪ ಮಾಡುತ್ತಿದ್ದಾವಲ್ಲ ಎಂದಾಗ ಶಿವಕುಮಾರ್, ಈ ಪ್ರಶ್ನೆಗೆ ಗೃಹ ಸಚಿವರು ಉತ್ತರ ನೀಡುತ್ತಾರೆ ಎಂದರು.