ಮನೆ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲು ನಿರ್ಧಾರ: ಪಂಚಮಸಾಲಿ ಸಮಾಜದ ಮುಖಂಡರ ಹೇಳಿಕೆ

ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲು ನಿರ್ಧಾರ: ಪಂಚಮಸಾಲಿ ಸಮಾಜದ ಮುಖಂಡರ ಹೇಳಿಕೆ

0

ವಿಜಯಪುರ: ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಸಮಾಜವನ್ನು ಒಡೆಯುವ ಮನಸ್ಥಿತಿಯ ವ್ಯಕ್ತಿ ನಮಗೆ ಬೇಕಿಲ್ಲ. ಹೀಗಾಗಿ ನಮ್ಮ ಸಮಾಜ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲು ನಿರ್ಧರಿಸಿದೆ ಎಂದು ಪಂಚಮಸಾಲಿ ಸಮಾಜದ ಮುಖಂಡರು ಹೇಳಿದರು.

Join Our Whatsapp Group

ಗುರುವಾರ ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಂಚಮಸಾಲಿ ಸಮಾಜದ ಮುಖಂಡರಾದ ಸಂಗಮೇಶ ಬಬಲೇಶ್ವರ, ಎಂ.ಆರ್.ಪಾಟೀಲ ಬಳ್ಳೊಳ್ಳಿ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 4 ರಂದು ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಗ್ರಾಮದಲ್ಲಿ ಸಮಾಜದ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸದರಿ ಸಮಾವೇಶದಲ್ಲಿ ಶಾಸಕರಾದ ಆಳಂದದ ಬಿ.ಆರ್.ಪಾಟೀಲ, ಧಾರವಾಡದ ವಿನಯ ಕುಲಕರ್ಣಿ, ಹುನಗುಂದದ ವಿಜಯಾನಂದ ಕಾಶಪ್ಪನವರ, ಕೊಪ್ಪಳ ಮಾಜಿ ಸಂಸದ ಸಂಗಣ್ಣ‌ ಕರಡಿ ಸೇರಿದಂತೆ ಸಮಾಜದ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದರು.

ಕ್ಷೇತ್ರದಲ್ಲಿ ಸತತ ಮೂರು ಬಾರಿ ಅಯ್ಕೆಯಾದರೂ ವಿಜಯಪುರ ಹಾಲಿ ಸಂಸದರು ಅಭಿವೃದ್ಧಿ ಕೆಲಸದ ಕಡೆಗೆ ಒತ್ತು ನೀಡುವ ಬದಲು ಸಮಾಜವನ್ನು ಒಡೆಯುವ ಕೆಲಸ ಮಾಡಿದರು. ಹೀಗಾಗಿ ನಿಷ್ಕ್ರಿಯ ಸಂಸದರನ್ನು ಬದಲಿಸಲು ನಮ್ಮ ಸಮಾಜ ನಿರ್ಧರಿಸಿದೆ ಎಂದರು.

ಈರಣ್ಣ ಪಟ್ಟಣಶೆಟ್ಟಿ, ಶಂಕರಗೌಡ ಬಿರಾದಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.