ಕ್ರಿಮಿನಲ್ ಪ್ರಕರಣಗಳಲ್ಲಿ ಕಂಪೆನಿಯನ್ನು ಪ್ರತಿವಾದಿಯನ್ನಾಗಿ ಮಾಡದೇ ಅದರ ನಿರ್ದೇಶಕರನ್ನು ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಲಾಗದು ಎಂದು ಈಚೆಗೆ ಅಭಿಪ್ರಾಯಪಟ್ಟಿರುವ ಕರ್ನಾಟಕ ಹೈಕೋರ್ಟ್, ಕನಿಷ್ಠ ವೇತನ ಕಾಯಿದೆ ಉಲ್ಲಂಘನೆ ಅಪರಾಧ ಪ್ರಕರಣಗಳಲ್ಲಿ ಕಂಪೆನಿಯನ್ನೂ ಅಗತ್ಯ ಪ್ರತಿವಾದಿಯನ್ನಾಗಿ ಮಾಡಬೇಕು ಎಂದಿದೆ.
ತನ್ನ ವಿರುದ್ಧ ಶಿವಮೊಗ್ಗದ ಜೆಎಂಎಫ್ಸಿ ಎರಡನೇ ನ್ಯಾಯಾಲಯದಲ್ಲಿ ನಡೆಯುತ್ತಿರುವ ಕ್ರಿಮಿನಲ್ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿ ಪಿ ಪಿ ಸೈಯದ್ ಪಾಷ ಅಲಿಯಾಸ್ ಪಿ ಎಸ್ ಅಯೂಬ್ ಮತ್ತು ಸಮೀರ್ ಸುಲ್ತಾನಾ ಅಲಿಯಾಸ್ ಶಮೀಮ್ ಸುಲ್ತಾನಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.
ಅರ್ಜಿದಾರರು ಅಟಿಕಾ ಗೋಲ್ಡ್ ಕಂಪೆನಿಯಲ್ಲಿ ನಿರ್ದೇಶಕರಾಗಿ ತಮ್ಮ ಹೊಣೆಗಾರಿಕೆ ನಿರ್ವಹಿಸಿದ್ದಾರೆ. ಅವರು ಕಂಪೆನಿಯ ಪರವಾಗಿ ಕಾರ್ಯ ನಿರ್ವಹಿಸುತ್ತಿರುವ ಕಾರಣ ಮೊದಲಿಗೆ ಕಂಪೆನಿಯನ್ನು ಪ್ರತಿವಾದಿಯನ್ನಾಗಿ ಮಾಡಬೇಕಾಗಿದೆ. ಕಂಪೆನಿಯನ್ನು ಪ್ರತಿವಾದಿಯನ್ನಾಗಿ ಮಾಡದೆ ಅರ್ಜಿದಾರರ ವಿರುದ್ಧ ಪ್ರಕರಣ ದಾಖಲಿಸಿದರೆ ಊರ್ಜಿತವಾಗುವುದಿಲ್ಲ ಎಂದು ಪೀಠ ಹೇಳಿದೆ. ಅರ್ಜಿದಾರರ ಪರ ಮೊಹಮದ್ ತಾಹೀರ್ ವಾದಿಸಿದ್ದರು.
ಪ್ರಕರಣದ ಹಿನ್ನೆಲೆ: ಅಟಿಕಾ ಗೋಲ್ಡ್ ಕಂಪೆನಿಯಲ್ಲಿ ಕಾರ್ಮಿಕರಿಗೆ ಸರಿಯಾದ ವೇತನ ನೀಡುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಶಿವಮೊಗ್ಗದ ಕಾರ್ಮಿಕ ಅಧಿಕಾರಿ ಸ್ಥಳೀಯ ನ್ಯಾಯಾಲಯದಲ್ಲಿ ಅದರ ನಿರ್ದೇಶಕರ ವಿರುದ್ಧ ಕನಿಷ್ಠ ವೇತನ ಕಾಯಿದೆ ಸೆಕ್ಷನ್ 25ರ ನಿಯಮ 7,9 ಹಾಗೂ 21ರ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಇದನ್ನು ವಿಚಾರಣೆಗೆ ಪರಿಗಣಿಸಿದ್ದ ನ್ಯಾಯಾಲಯ ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಲು ಆದೇಶಿಸಿತ್ತು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.