ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಕಿಡ್ನ್ಯಾಪ್ ಕೇಸ್ ನಲ್ಲಿ ಎಸ್ ಐಟಿ ಬಂಧನದಲ್ಲಿರುವ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ವಿಚಾರಣೆ ತೀವ್ರಗೊಂಡಿದೆ.
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮನೆಯಿಂದ ರೇವಣ್ಣರನ್ನು ಬಂಧಿಸಿದ್ದ ಎಸ್ ಐಟಿ ಸಂಜೆ ಜಡ್ಜ್ ಎದುರು ಹಾಜರುಪಡಿಸಿತ್ತು. ಈ ವೇಳೆ ರಾಜಕೀಯ ಭವಿಷ್ಯವನ್ನು ನೆನಪಿಸಿಕೊಂಡು ರೇವಣ್ಣ ಕೈ ಮುಗಿದು ಕಣ್ಣೀರು ಹಾಕಿದ್ದರು. ರಾಜಕೀಯ ಷಡ್ಯಂತ್ರ ನಡೆಸಿ ನನ್ನ ಬಂಧನವಾಗಿದೆ ಅಂತ ಅಳಲು ತೋಡಿಕೊಂಡಿದ್ದರು. ಸದ್ಯ 4 ದಿನಗಳ ಕಾಲ ಎಸ್ಐಟಿ ಕಸ್ಟಡಿಯಲ್ಲಿರುವ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದಾರೆ.
ಮಹಿಳೆಯನ್ನು ಬಲವಂತವಾಗಿ ದೈಹಿಕವಾಗಿ ಬಳಸಿಕೊಂಡಿದ್ದರು ಎಂದು ಎಸ್ಐಟಿ ಹೇಳಿಕೆ ದಾಖಲಿಸಿಕೊಂಡಿದೆ. ಆದ್ರೆ, ಎಸ್ಐಟಿ ಪ್ರಶ್ನೆಗೆ ಸರಿಯಾಗಿ ಉತ್ತರ ನೀಡದ ರೇವಣ್ಣ, ಕಿಡ್ನ್ಯಾಪ್ ಗೂ ನನಗೂ ಸಂಬಂಧವಿಲ್ಲ. ಕಿಡ್ನ್ಯಾಪ್ ಮಾಡಿ ಅಂತಾ ಯಾರಿಗೂ ಹೇಳಿಲ್ಲ ಅಂತಾ ಒಂದೇ ಉತ್ತರ ನೀಡಿದ್ದಾರೆ. ಅಲ್ಲದೇ ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ಹಿಂದೇಟು ಹಾಕಿದ್ದಾರೆ.
ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಬಂಧನವಾಗಿರುವ ರೇವಣ್ಣ ಕಸ್ಟಡಿ ವೇಳೆಯಲ್ಲಿ ರೇವಣ್ಣ ಬೇಲ್ ಅರ್ಜಿ ಸಲ್ಲಿಸಬಹುದು. ಕಸ್ಟಡಿ ಅವಧಿ ಮುಗಿದ ಬಳಿಕವೇ ಬೇಲ್ ಬಗ್ಗೆ ತೀರ್ಮಾನವಾಗಲಿದೆ. ಕಸ್ಟಡಿ ಅವಧಿ ನಂತರ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್ಐಟಿ ಸಿದ್ಧತೆ ಮಾಡಿಕೊಂಡಿದೆ. ಬೇಲ್ ಅರ್ಜಿಗೆ ಎಸ್ಐಟಿ ಆಕ್ಷೇಪಣೆಯನ್ನು ಕೋರ್ಟ್ ಪರಿಗಣಿಸಲಿದೆ. ಎರಡೂ ಕಡೆ ವಾದಮಂಡನೆ ನಂತರವೇ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.
ಎಸ್ಐಟಿ ಬಂಧನದ ಬಳಿಕ ರೇವಣ್ಣ ಮಾನಸಿಕವಾಗಿ ಕುಗ್ಗಿದ್ದಾರೆ. ಪ್ರತಿದಿನ 9.30ರಿಂದ 10.30ರ ಸಮಯದಲ್ಲಿ ಒಂದು ಗಂಟೆ ವಕೀಲರ ಭೇಟಿಗೆ ಅವಕಾಶ ಇದೆ. ವಕೀಲರ ಭೇಟಿಗೆ ಅವಕಾಶ ನೀಡಿ ಜಡ್ಜ್ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆ ಇಂದು ಸಿಐಡಿ ಎಸ್ಐಟಿ ಕಚೇರಿಯಲ್ಲಿ ಭೇಟಿಗೆ ಅನುವು ಮಾಡಿಕೊಡಲಾಗಿದೆ.
ಇನ್ನು ಹೊಳೆನರಸೀಪುರದಲ್ಲಿ ದೂರು ನೀಡಿದ್ದ ಸಂತ್ರಸ್ತ ಮಹಿಳೆಯನ್ನು ಬೆಂಗಳೂರಿನ ಬಸವನಗುಡಿಯಲ್ಲಿರುವ ರೇವಣ್ಣ ನಿವಾಸಕ್ಕೆ ಕರೆತಂದು ಸ್ಥಳ ಮಹಜರು ಮಾಡಲಾಯ್ತು. ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಪಟ್ಟಂತೆ ಸಂತ್ರಸ್ತೆಯಿಂದ ಎಸ್ಐಟಿ ಅಧಿಕಾರಿಗಳು ಹೇಳಿಕೆ ದಾಖಲು ಮಾಡಿದ್ರು. ಸಂತ್ರಸ್ತೆ ಹೇಳಿಕೆ ಆಧರಿಸಿ ಮನೆಯಲ್ಲಿ ಸಂಪೂರ್ಣ ಮಹಜರು ಮಾಡಲಾಯ್ತು. ನಾಲ್ವರು ಮಹಿಳಾ ಅಧಿಕಾರಿಗಳು ಸೇರಿ 6 ಅಧಿಕಾರಿಗಳ ತಂಡ ಮಹಜರು ನಡೆಸಿದರು.
ರೇವಣ್ಣರನ್ನ ಇಂದು ಹಾಸನ ಅಥವಾ ಕೆ.ಆರ್. ನಗರಕ್ಕೆ ಕರೆದೊಯ್ದು ಸ್ಥಳ ಮಹಜರು ಮಾಡುವ ಸಾಧ್ಯತೆಯಿದೆ. ಮಹಿಳೆಯನ್ನು ಕರೆದುಕೊಂಡು ಹೋಗಿದ್ದ ಸ್ಥಳ, ಕೂಡಿಟ್ಟ ಸ್ಥಳ, ಮಹಿಳೆಯ ಕರೆತಂದ ಸತೀಶ್ ಬಾಬು-ರೇವಣ್ಣ ಭೇಟಿಯಾದ ಗೌಪ್ಯ ಸ್ಥಳದ ಬಗ್ಗೆಯೂ ತನಿಖೆ ನಡೆಯಲಿದೆ.
ರೇವಣ್ಣ, ಪ್ರಜ್ವಲ್ ವಿರುದ್ಧ ದಾಖಲಾಗಿರುವ ಕೇಸ್ ಗಳಿಂದ ರೇವಣ್ಣ ಪತ್ನಿ ಭವಾನಿಗೂ ಸಂಕಷ್ಟ ಎದುರಾಗಿದೆ. ಲೈಂಗಿಕ ಕಿರುಕುಳ, ಕಿಡ್ನ್ಯಾಪ್ ಎರಡೂ ಕೇಸ್ನಲ್ಲೂ ಭವಾನಿ ರೇವಣ್ಣ ಹೆಸರು ಉಲ್ಲೇಖವಾಗಿದೆ. ಭವಾನಿ ಕರೆದರು ಎಂದು ಹೇಳಿಯೇ ಕಿಡ್ನ್ಯಾಪ್ ಮಾಡಿರುವ ಆರೋಪವಿದೆ. ಭವಾನಿಗೆ ನೋಟಿಸ್ ನೀಡಿ ಎಸ್ಐಟಿ ಮಾಹಿತಿ ಪಡೆದಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.