ಮನೆ ರಾಜಕೀಯ ಅಧಿಕೃತವಾಗಿ ಬಿಜೆಪಿ ಸೇರಿದ ಬಸವರಾಜ ಹೊರಟ್ಟಿ

ಅಧಿಕೃತವಾಗಿ ಬಿಜೆಪಿ ಸೇರಿದ ಬಸವರಾಜ ಹೊರಟ್ಟಿ

0

ಬೆಂಗಳೂರು(Bengaluru): ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಸವರಾಜ ಹೊರಟ್ಟಿ ಅವರು ಜೆಡಿಎಸ್ ತೊರೆದು ಅಧಿಕೃತವಾಗಿ ಇಂದು ಬಿಜೆಪಿ ಸೇರ್ಪಡೆಗೊಂಡರು.

ಬುಧವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಕ್ಷದ ಧ್ವಜ ಮತ್ತು ಶಾಲು ಹೊದಿಸಿ ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಂಡರು.

ಜೆಡಿಎಸ್ ಮೂಲಕ ವಿಧಾನ ಪರಿಷತ್ ಸಭಾಪತಿಯಾಗಿ ಕಳೆದ ಫೆಬ್ರವರಿಯಲ್ಲಿ ನೇಮಕ ಆಗಿದ್ದ ಬಸವರಾಜ ಹೊರಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮೇ 17ರಂದು ರಾಜೀನಾಮೆ ಅಂಗೀಕಾರ ಆಗುತ್ತಿದ್ದಂತೆ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಚಿವರಾದ ಗೋವಿಂದ ಎಂ. ಕಾರಜೋಳ, ಆರ್. ಅಶೋಕ್ ಸಹಿತ ಹಲವರು ಹೊರಟ್ಟಿ ಅವರನ್ನು ಅಭಿನಂದಿಸಿ ಸ್ವಾಗತಿಸಿದರು.