ಪಾಟ್ನಾ: ಫಾರೂಕ್ ಅಬ್ದುಲ್ಲಾ ಮತ್ತು ಮಣಿಶಂಕರ್ ಅಯ್ಯರ್ ಹೇಳಿಕೆ ಬಗ್ಗೆ ಇಂಡಿಯಾ ಬಣ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಹಣದ ಕೊರತೆಯಿರುವ ಪಾಕಿಸ್ತಾನ ಬಳೆ ತೊಟ್ಟಿಲ್ಲ ಅಂದರೆ ಭಾರತ ಅವರಿಗೆ ಬಳೆ ತೊಡಿಸುತ್ತದೆ ಎಂದು ಹೇಳಿದ್ದಾರೆ.
ಈ ತಿಂಗಳ ಆರಂಭದಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಹಿಂಪಡೆಯುವ ರಾಜನಾಥ್ ಸಿಂಗ್ ಅವರ ಪ್ರತಿಜ್ಞೆಗೆ ಪ್ರತಿಕ್ರಿಯಿಸಿದ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ, ನೆರೆಯ ದೇಶವು ಬಳೆ ತೊಟ್ಟುಕೊಂಡಿಲ್ಲ, ಭಾರತಕ್ಕೆ ಹಾನಿ ಮಾಡುವ ಪರಮಾಣು ಬಾಂಬ್ಗಳನ್ನು ಹೊಂದಿದೆ ಎಂದು ಹೇಳಿದ್ದರು.
“ಪಾಕಿಸ್ತಾನ್ ನೆ ಚೂಡಿಯಾಂ ನಹೀ ಪೆಹನಿ ಹೈ, ಅರೆ ಭಾಯಿ ಪೆಹನಾ ದೇಂಗೆ. ಅಬ್ ಉನ್ಕೋ ಆಟಾ ಭಿ ಚಾಹಿಯೇ, ಉನ್ಕೇ ಪಾಸ್ ಬಿಜ್ಲಿ ಭಿ ನಹೀ ಹೈ, ಅಬ್ ಹಮೇನ್ ಮಾಲೂಮ್ ಪಡಾ ಉನ್ಕೇ ಪಾಸ್ ಚೂಡಿಯನ್ ಭೀ ನಹೀ ಹೈ (ಪಾಕಿಸ್ತಾನ ಬಳೆಗಳನ್ನು ತೊಟ್ಟಿಲ್ಲ ಅಂದ್ರೆ ನಾವು ಅವರಿಗೆ ಬಳೆ ತೊಡಿಸುತ್ತೇವೆ. ಅವರಿಗೆ ಈಗ ಗೋಧಿಯೂ ಬೇಕಿದೆ. ಅವರಿಗೆ ವಿದ್ಯುತ್ ಇಲ್ಲ. ಈಗ ಅವರಿಗೆ ಬಳೆಗಳ ಕೊರತೆಯಿದೆ ಎಂದು ನನಗೆ ಗೊತ್ತಾಯಿತು)”ಎಂದು ಬಿಹಾರದ ಮುಜಾಫರ್ಪುರದಲ್ಲಿ ಭಾಷಣ ಮಾಡಿದ ಪ್ರಧಾನಿ ಮೋದಿ, ಫಾರೂಕ್ ಅಬ್ದುಲ್ಲಾ ಅಥವಾ ಅಯ್ಯರ್ ಹೆಸರನ್ನು ಉಲ್ಲೇಖಿಸದೆ ವ್ಯಂಗ್ಯವಾಡಿದ್ದಾರೆ.
ಮಣಿಶಂಕರ್ ಅಯ್ಯರ್ ಅವರ ಹಳೆಯ ವಿಡಿಯೊ ಕಳೆದ ವಾರ ವೈರಲ್ ಆಗಿತ್ತು, ಇದರಲ್ಲಿ ಕಾಂಗ್ರೆಸ್ ಹಿರಿಯರ ನಾಯಕ, ಭಾರತ ಸರ್ಕಾರ ಪಾಕಿಸ್ತಾನವನ್ನು ಗೌರವಿಸಬೇಕು, ಅವರಲ್ಲಿ ಪರಮಾಣು ಬಾಂಬ್ ಇದೆ ಎಂದು ಹೇಳಿದ್ದರು. ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಕಾಂಗ್ರೆಸ್ ದೇಶದ ಜನರನ್ನು ಬೆದರಿಸಲು ಪ್ರಯತ್ನಿಸುತ್ತಿದೆ ಎಂದು ಕಳೆದ ವಾರ ಹೇಳಿದ್ದರು. ಇಂತಹ ದುರ್ಬಲ ಧೋರಣೆ ಈ ಹಿಂದೆ ಗಡಿಯಾಚೆಗಿನ ಭಯೋತ್ಪಾದನೆಗೆ ಉತ್ತೇಜನ ನೀಡಿತ್ತು ಎಂದರು. ನೆರೆಯ ದೇಶವು ತನ್ನ ಬಾಂಬ್ಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದೆ ಆದರೆ ಅವುಗಳ ಕಳಪೆ ಗುಣಮಟ್ಟದ ಕಾರಣ ಅದನ್ನು ಖರೀದಿಸಲು ಯಾರೂ ಆಸಕ್ತಿ ವಹಿಸಲಿಲ್ಲ ಎಂದು ಹೇಳಿದ್ದಾರೆ.
ಕಳೆದ 10 ವರ್ಷಗಳಲ್ಲಿ ತಮ್ಮ ಸರ್ಕಾರ ₹ 2200 ಕೋಟಿ ಅಕ್ರಮ ಹಣವನ್ನು ವಶಪಡಿಸಿಕೊಂಡಿದೆ ಎಂದು ಪ್ರಧಾನಿ ಮೋದಿ ಇಂದು(ಸೋಮವಾರ) ಹೇಳಿದ್ದಾರೆ.
ಆರ್ಜೆಡಿ ಮತ್ತು ಕಾಂಗ್ರೆಸ್ ಬಿಹಾರದ ಜನರ ಕಲ್ಯಾಣಕ್ಕಿಂತ ತಮ್ಮ ಮತ ಬ್ಯಾಂಕ್ಗೆ ಆದ್ಯತೆ ನೀಡುತ್ತವೆ ಎಂದು ಹಾಜಿಪುರದಲ್ಲಿ ಪಿಎಂ ಮೋದಿ ಹೇಳಿದ್ದಾರೆ. ಆರ್ಜೆಡಿ ರಾಜ್ಯಕ್ಕೆ ಜಂಗಲ್ ರಾಜ್ ತಂದಿದೆ ಎಂದು ಪ್ರಧಾನಿ ಆರೋಪಿಸಿದರು.
ಲಾಲು ಪ್ರಸಾದ್ ಯಾದವ್ ಅವರ “ಮುಸ್ಲಿಮರು ಮೀಸಲಾತಿ ಪಡೆಯಬೇಕು ಎಂಬ ಹೇಳಿಕೆಯನ್ನು ಉಲ್ಲೇಖಿಸಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮತ್ತು ಆರ್ಜೆಡಿ ದಲಿತರು, ಹಿಂದುಳಿದವರು ಮತ್ತು ಬುಡಕಟ್ಟು ಜನಾಂಗದವರಿಗೆ ಸಂವಿಧಾನದಿಂದ ಒದಗಿಸಿದ ಮೀಸಲಾತಿಯನ್ನು ಕಿತ್ತುಕೊಳ್ಳುತ್ತವೆ ಎಂದು ಹೇಳಿದ್ದು, ಕಾಂಗ್ರೆಸ್ ಮತ್ತು ಆರ್ಜೆಡಿ ನಾಯಕರು ತಮ್ಮ ಸ್ವಂತ ಮಕ್ಕಳ ವಿಷಯದಲ್ಲಿ ನಿರತರಾಗಿದ್ದಾರೆ ಎಂದು ಹೇಳಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.