ಉತ್ತರ ಪ್ರದೇಶ: ಎರಡು ವಾಹನಗಳ ನಡುವೆ ಡಿಕ್ಕಿ ಸಂಭವಿಸಿ 6 ಮಂದಿ ಸಾವನ್ನಪ್ಪಿರುವ ಘಟನೆ ಹಾಪುರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 09 ರ ಅಲ್ಲಾಭಕ್ಷಪುರ ಟೋಲ್ ಪ್ಲಾಜಾ ಬಳಿ ನಡೆದಿದೆ.
ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಇನ್ನೊಂದು ಬದಿಗೆ ತಲುಪಿದೆ. ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು.
ಆರು ಮಂದಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಅಪಘಾತದ ನಂತರ ಹೆದ್ದಾರಿಯಲ್ಲಿ ಜಾಮ್ ಆಗಿತ್ತು. ಇದರಿಂದ ಚಾಲಕರು ತೊಂದರೆ ಅನುಭವಿಸಬೇಕಾಯಿತು. ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ಹಾಪುರದಿಂದ ಮೊರಾದಾಬಾದ್ ಕಡೆಗೆ ಕಾರು ವೇಗವಾಗಿ ಹೋಗುತ್ತಿತ್ತು.
ಕೊತ್ವಾಲಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ-9 ರಲ್ಲಿರುವ ಅಲ್ಲಾಬಕ್ಷ್ಪುರ ಗ್ರಾಮವನ್ನು ತಲುಪಿದಾಗ, ಚಾಲಕನ ನಿಯಂತ್ರಣ ತಪ್ಪಿ ಕಾರು ಹೆದ್ದಾರಿಯಲ್ಲಿನ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಅತಿವೇಗದ ಕಾರಣ ಮೊರಾದಾಬಾದ್ ನಿಂದ ದೆಹಲಿಗೆ ತೆರಳುವ ಮಾರ್ಗದಲ್ಲಿ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಈ ವೇಳೆ ಇನ್ನೊಂದು ಕಡೆಯಿಂದ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತ ಎಷ್ಟು ತೀವ್ರವಾಗಿತ್ತು ಎಂದರೆ ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ವಾಹನಗಳು ಡಿಕ್ಕಿ ಹೊಡೆದ ಸದ್ದು ಕೇಳಿದ ಗ್ರಾಮಸ್ಥರು ಎಚ್ಚೆತ್ತುಕೊಂಡಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಗ್ರಾಮಸ್ಥರು ಕಾರಿನಲ್ಲಿ ಸಿಲುಕಿದ್ದವರನ್ನು ಹೊರ ತೆಗೆಯಲು ಯತ್ನಿಸಿದರಾದರೂ ಕಾರಿನಲ್ಲಿ ಸಿಲುಕಿದ್ದವರು ಬಹಳ ಹೊತ್ತಾದರೂ ಹೊರತೆಗೆಯಲು ಸಾಧ್ಯವಾಗಲಿಲ್ಲ.
ಗ್ರಾಮಸ್ಥರ ನೆರವಿನಿಂದ ಪೊಲೀಸರು ಕಾರನ್ನು ಕಟ್ ಮಾಡಿ ಗಾಯಾಳುಗಳನ್ನು ಹೊರತೆಗೆದಿದ್ದಾರೆ. ತಕ್ಷಣ ಆಂಬ್ಯುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ವೈದ್ಯರು ಆರು ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.