ಮನೆ ರಾಜ್ಯ ಅಜ್ಜಂಪುರ ಕ್ರಾಸ್‌ ನಲ್ಲಿ ಕೆಎಸ್‌ ಆರ್‌ ಟಿಸಿಯ ಐರಾವತ ಬಸ್‌ ನಲ್ಲಿ ಬೆಂಕಿ: ಪ್ರಯಾಣಿಕರು ಪಾರು

ಅಜ್ಜಂಪುರ ಕ್ರಾಸ್‌ ನಲ್ಲಿ ಕೆಎಸ್‌ ಆರ್‌ ಟಿಸಿಯ ಐರಾವತ ಬಸ್‌ ನಲ್ಲಿ ಬೆಂಕಿ: ಪ್ರಯಾಣಿಕರು ಪಾರು

0

ತರೀಕೆರೆ (ಚಿಕ್ಕಮಗಳೂರು ಜಿಲ್ಲೆ): ತರೀಕೆರೆ ಸಮೀಪದ ಅಜ್ಜಂಪುರ ಕ್ರಾಸ್‌ ನಲ್ಲಿ ಮಂಗಳವಾರ ನಸುಕಿನ ಜಾವ 1.30ರ ವೇಳೆಗೆ ಕೆಎಸ್‌ ಆರ್‌ ಟಿಸಿಯ ಐರಾವತ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

Join Our Whatsapp Group

ಅದೃಷ್ಟವಶಾತ್‌ ಬಸ್‌ನಲ್ಲಿದ್ದ ಎಲ್ಲ ಪ್ರಯಾಣಿಕರು ಯಾವುದೇ ಅಪಾಯ ಇಲ್ಲದೇ ಪಾರಾಗಿದ್ದಾರೆ.

ಶಿವಮೊಗ್ಗದಿಂದ ಮೈಸೂರು ಕಡೆಗೆ ಹೊರಟಿದ್ದ ಕೆಎ 01 ಎಫ್ 9077 ಸಂಖ್ಯೆಯ ಬಸ್‌ನಲ್ಲಿ ಸಿಬ್ಬಂದಿ ಸೇರಿ ಒಟ್ಟು 40 ಜನ ಪ್ರಯಾಣಿಸುತ್ತಿದ್ದರು. ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿತು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಬಸ್‌ ಚಾಲಕ ಬಸ್‌ ನಿಲ್ಲಿಸಿ ಎಲ್ಲ ಪ್ರಯಾಣಿಕರನ್ನು ಕೆಳಗೆ ಇಳಿಸಿದರು.  ಅಗ್ನಿಶಾಮಕ ಅಧಿಕಾರಿ ತಿಪ್ಪೇಸ್ವಾಮಿ ನೇತೃತ್ವದಲ್ಲಿ ಬೆಂಕಿಯನ್ನು ನಂದಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್‌ ಚಾಲಕ ಜಾಗರೂಕತೆ ವಹಿಸಿದ್ದರಿಂದ ಯಾವುದೇ ಜೀವ ಹಾನಿ ಸಂಭವಿಸಿಲ್ಲ ಎಂದು ಅವರು ಹೇಳಿದ್ದಾರೆ.