ತುಮಕೂರು: ಜಮೀನು ಖಾತೆ ಮತ್ತು ಪಹಣಿಗಳನ್ನು ತಂದೆಯ ಹೆಸರಿನಿಂದ ಮಗನ ಹೆಸರಿಗೆ ವರ್ಗಾವಣೆ ಮಾಡಿಕೊಡಲು 10 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದ ಸಿ.ಎಸ್.ಪುರ ಹೋಬಳಿ ರಾಜಸ್ವ ನಿರೀಕ್ಷಕರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕೆ.ನರಸಿಂಹಮೂರ್ತಿ ಎಂಬುವರೇ ಲೋಕಾಯುಕ್ತರ ಬಲೆಗೆ ಬಿದ್ದ ಅಧಿಕಾರಿ.
ತುಮಕೂರಿನ ಗುಬ್ಬಿ ತಾಲೂಕಿನ ಸಿ.ಎಸ್.ಪುರ ಹೋಬಳಿಯ ಗದ್ದೆಹಳ್ಳಿ ನಾಗರಾಜು ಎಂಬುವರು ತಮ್ಮ ತಂದೆ ಚಿಕ್ಕಯಲ್ಲಯ್ಯ ಅವರ ಹೆಸರಿನಲ್ಲಿದ್ದ ಜಮೀನನ್ನು ತಾಲೂಕು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಹಕ್ಕು ಖುಲಾಸೆ ಪತ್ರದ ಮೂಲಕ ತಮಗೆ ನೋಂದಣಿ ಮಾಡಿಕೊಂಡಿದ್ದರು. ಬಳಿಕ ಈ ಜಮೀನಿನ ಖಾತೆ ಮತ್ತು ಪಹಣಿಗಳನ್ನು ತಮ್ಮ ಹೆಸರಿಗೆ ವರ್ಗಾವಣೆ ಮಾಡಿಕೊಳ್ಳಲು ಮುಂದಾಗಿದ್ದರು. ಆದರೆ, ಖಾತೆ ಮತ್ತು ಪಹಣಿ ವರ್ಗಾವಣೆಗೆ ರಾಜಸ್ವ ನಿರೀಕ್ಷಕ ಕೆ.ನರಸಿಂಹಮೂರ್ತಿ ಅವರು 10 ಸಾವಿರ ರೂ. ಲಂಚ ಕೇಳಿದ್ದರು. ಈ ಹಣವನ್ನು ಸ್ವೀಕರಿಸುವ ವೇಳೆ ಕೆ.ನರಸಿಂಹಮೂರ್ತಿ ಸಿಕ್ಕಿಬಿದ್ದಿದ್ದಾರೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ಕೆ.ನರಸಿಂಹಮೂರ್ತಿ ಈ ಹಿಂದೆ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ರಾಜಸ್ವ ನಿರೀಕ್ಷಕನಾಗಿ ಕರ್ತವ್ಯ ನಿರ್ವಹಿಸುವಾಗ ತುಮಕೂರು ನಗರದಲ್ಲಿನ ನಿವೇಶನವನ್ನು ಫಯಾಜ್ ಎಂಬುವರ ಹೆಸರಿಗೆ ಖಾತೆ ಬದಲಾವಣೆ ಮಾಡಿಕೊಡಲು 15 ಸಾವಿರ ರೂ. ಲಂಚ ಕೇಳಿದ್ದರು. ಈ ಸಂಬಂಧ ಜುಲೈ 7, 2023ರಂದು ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು ಎಂದು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಾರ್ಯಾಚರಣೆಯಲ್ಲಿ ತುಮಕೂರು ಲೋಕಾಯುಕ್ತ ಕಚೇರಿಯ ಪೊಲೀಸ್ ಅಧೀಕ್ಷಕ ವಲಿಬಾಷಾ, ಪೊಲೀಸ್ ಉಪಾಧೀಕ್ಷಕ ಬಿ.ಉಮಾಶಂಕರ್, ಪೊಲೀಸ್ ಇನ್ಸ್ಪೆಕ್ಟರ್ಗಳಾದ ಸುರೇಶ್ ಕೆ. ಹಾಗೂ ಬಿ.ಮೊಹಮ್ಮದ್ ಭಾಗವಹಿಸಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.