ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಭಾರತೀಯ ಸೇನೆ ಗುರುವಾರ ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ ನಂತರ ಇಬ್ಬರು ಭಯೋತ್ಪಾದಕರನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.
ತಂಗ್ಧರ್ ಸೆಕ್ಟರ್ನ ಬೇಲಿಯ ಇನ್ನೊಂದು ಬದಿಯಲ್ಲಿ ಶವಗಳು ಬಿದ್ದಿರುವುದು ಕಂಡುಬಂದಿದೆ.
ಬಾರಾಮುಲ್ಲಾ ಲೋಕಸಭಾ ಚುನಾವಣೆಗೆ ಕೆಲವೇ ದಿನಗಳಿರುವಾಗ ಉತ್ತರ ಕಾಶ್ಮೀರದ ಕುಪ್ವಾರದ ತಂಗ್ಧರ್ ಪ್ರದೇಶದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಭದ್ರತಾ ಪಡೆಗಳು ಪ್ರಮುಖ ಭಯೋತ್ಪಾದಕರ ಒಳನುಸುಳುವಿಕೆಯ ಪ್ರಯತ್ನವನ್ನು ವಿಫಲಗೊಳಿಸಿವೆ. ಒಳನುಸುಳುವಿಕೆ ಯತ್ನವನ್ನು ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ತಂಡ ವಿಫಲಗೊಳಿಸಿತು.
ಮೇ 20ರಂದು ಚುನಾವಣೆ ನಡೆಯಲಿರುವ ಕುಪ್ವಾರದ ಈ ಪ್ರದೇಶವು ಬಾರಾಮುಲ್ಲಾ ಸಂಸದೀಯ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಶ್ರೀನಗರದಲ್ಲಿ ದಾಖಲೆ ಮಟ್ಟದ ಮತದಾನದ ನಂತರ, ಬಾರಾಮುಲ್ಲಾ ಮತ್ತು ಉತ್ತರ ಕಾಶ್ಮೀರದಲ್ಲಿ ಹೆಚ್ಚಿನ ಮತದಾನದ ಪ್ರಮಾಣವು ಕಂಡುಬರಬಹುದು ಎಂದು ನಿರೀಕ್ಷಿಸಲಾಗಿದೆ.
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಗಡಿ ನಿಯಂತ್ರಣ ರೇಖೆಯ (ಎಲ್ಒಸಿ) ಇನ್ನೊಂದು ಬದಿಯಲ್ಲಿ ಒಳನುಸುಳುತ್ತಿರುವ ಉಗ್ರರ 4 ಮೃತದೇಹಗಳು ಪತ್ತೆಯಾಗಿದ್ದು, ಇನ್ನೂ ಹೆಚ್ಚಿನ ಭಯೋತ್ಪಾದಕರ ಪತ್ತೆಗಾಗಿ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಕಳೆದ ತಿಂಗಳು ಇದೇ ರೀತಿಯ ಘಟನೆಯಲ್ಲಿ, ಬಾರಾಮುಲ್ಲಾ ಜಿಲ್ಲೆಯ ಉರಿಯಲ್ಲಿ ಎಲ್ಒಸಿ ಉದ್ದಕ್ಕೂ ಒಳನುಸುಳುವಿಕೆ ಪ್ರಯತ್ನವನ್ನು ಸೇನೆ ವಿಫಲಗೊಳಿಸಿದ ನಂತರ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿತ್ತು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.