ಮನೆ ರಾಷ್ಟ್ರೀಯ ಗುಜರಾತ್‌ ದುರಂತ: ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ

ಗುಜರಾತ್‌ ದುರಂತ: ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ

0

ಮೊರ್ಬಿ (ಗುಜರಾತ್) Morbi (Gujarat)- ಮೊರ್ಬಿಯ ಹಲ್ವಾಡ್ ಜಿಐಡಿಸಿಯಲ್ಲಿ ಉಪ್ಪಿನ ಕಾರ್ಖಾನೆಯ ಗೋಡೆ ಕುಸಿದು 12 ಕಾರ್ಮಿಕರು ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50,000 ರೂಪಾಯಿಗಳನ್ನು ಪರಿಹಾರವನ್ನು ಪ್ರಧಾನ ಮಂತ್ರಿ ಸಚಿವಾಲಯ ಘೋಷಿಸಿದೆ.

ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತೀವ್ರ ದುಃಖ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದಾರೆ. ಮೊರ್‌ಬಿಯಲ್ಲಿ ಗೋಡೆ ಕುಸಿದು ಸಂಭವಿಸಿದ ದುರಂತವು ಹೃದಯ ವಿದ್ರಾವಕವಾಗಿದೆ. ದುಃಖತಪ್ತ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ. ಸಂತ್ರಸ್ತರಿಗೆ ಸ್ಥಳೀಯ ಅಧಿಕಾರಿಗಳು ಎಲ್ಲ ರೀತಿಯ ನೆರವು ನೀಡುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.

ಘಟನೆ ಬಳಿಕ ಸರ್ಕಾರ ಮೃತರ ಕುಟುಂಬಸ್ಥರ ನೆರವಿಗೆ ನಿಲ್ಲಲಿದೆ ಎಂದು ಸಚಿವ ಬ್ರಿಜೇಶ್ ಮೆರ್ಜ ತಿಳಿಸಿದ್ದಾರೆ.