ಕಲಬುರಗಿ: ಕೇಂದ್ರೀಯ ಮೀಸಲು ಪೊಲೀಸ್ ಪಡೆ ಬಸ್ ಅನ್ನು ಕಳ್ಳತನ ಮಾಡಲು ಯತ್ನಿಸಿದ್ದ ಘಟನೆ ಕಲಬುರಗಿ ನಗರದಲ್ಲಿರುವ ಪೊಲೀಸ್ ಕಮಿಷನರ್ ಕಚೇರಿ ಆವರಣದಲ್ಲಿ ನಡೆದಿದೆ.
ಸೋನು ಭಗಿರಥ ಕಳ್ಳತನದ ಆರೋಪಿ. ಕೆಎ 32 ಜಿ 1550 ನಂಬರ್ನ ಸಿಆರ್ಪಿಎಫ್ ಪೊಲೀಸರ ಬಸ್ ಅನ್ನು ಕಮಿಷನರ್ ಕಚೇರಿ ಆವರಣದಲ್ಲಿ ನಿಲ್ಲಿಸಲಾಗಿತ್ತು.
ಚತ್ತಿಸಘಡ ಮೂಲದ ಕಳ್ಳ ಸೋನು ಭಗಿರಥ ಕಲಬುರಗಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದನು. ಸೋಮವಾರ ಕುಡಿದ ನಶೆಯಲ್ಲಿ ಮಧ್ಯರಾತ್ರಿ ಕಮಿಷನರ್ ಕಚೇರಿ ಆವರಣದೊಳಗೆ ಬಂದಿದ್ದಾನೆ. ಬಳಿಕ ಆವರಣದಲ್ಲಿ ನಿಲ್ಲಿಸಿದ್ದ ಸಿಆರ್ ಪಿಎಫ್ ಪೊಲೀಸರ ಬಸ್ ಒಳಗಡೆ ಹೋಗಿದ್ದಾನೆ. ಬಸ್ ನಲ್ಲಿ ಓರ್ವ ಕಾನ್ ಸ್ಟೇಬಲ್ ಇದ್ದು, ನಿದ್ದೆಗೆ ಜಾರಿದ್ದರು.
ಪೊಲೀಸ್ ಕಾನ್ಸಟೇಬಲ್ ಬಸ್ ನ ಕಿಟಕಿಗೆ ತಮ್ಮ ಬಟ್ಟೆ ನೇತು ಹಾಕಿ, ಮಲಗಿದ್ದರು. ಇದನ್ನು ಕಂಡ ಕಳ್ಳ ಸೋನು ಪೊಲೀಸ್ ಕಾನ್ಸಟೇಬಲ್ ಜೇಬಿನಲ್ಲಿದ್ದ ಬಸ್ ಕೀ ತೆಗೆದುಕೊಂಡಿದ್ದಾನೆ. ಬಳಿಕ ಬಸ್ ಸ್ಟಾರ್ಟ್ ಮಾಡುತ್ತಿದ್ದ ಹಾಗೆ ಪೊಲೀಸ್ ಕಾನ್ಸಟೇಬಲ್ ಎಚ್ಚೆತ್ತುಕೊಂಡಿದ್ದಾನೆ. ತಕ್ಷಣ ಪೊಲೀಸ್ ಕಾನ್ಸಟೇಬಲ್ ಆರೋಪಿ ಸೋನು ಭಗಿರಥನನ್ನು ಬಂಧಿಸಿದ್ದಾರೆ.
ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.