ಮನೆ ಅಪರಾಧ ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಅಪಘಾತ ಪ್ರಕರಣ: ಬಾಲಕನ ತಂದೆ ವಶಕ್ಕೆ

ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಅಪಘಾತ ಪ್ರಕರಣ: ಬಾಲಕನ ತಂದೆ ವಶಕ್ಕೆ

0

ಅಪ್ರಾಪ್ತ ಚಾಲಕನೊಬ್ಬ ವೇಗವಾಗಿ ಕಾರು ಓಡಿಸಿ, ಬೈಕ್​ಗೆ ಡಿಕ್ಕಿ ಹೊಡೆಸಿ  ಇಬ್ಬರ ಸಾವಿಗೆ ಕಾರಣವಾಗಿದ್ದ ಪ್ರಕರಣದಲ್ಲಿ ಬಾಲಕನ ತಂದೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Join Our Whatsapp Group

ಭಾನುವಾರ ಬೆಳಗ್ಗೆ ಪುಣೆಯ ಕಲ್ಯಾಣನಗರದಲ್ಲಿ ಬಾಲಕ ಚಲಾಯಿಸುತ್ತಿದ್ದ ಸ್ಪೋರ್ಟ್ಸ್​ ಕಾರು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದರು. ಸಿಸಿಟಿವಿ ದೃಶ್ಯದಲ್ಲಿ ಆತ ವೇಗವಾಗಿ ಕಾರು ಚಲಾಯಿಸುತ್ತಿರುವುದನ್ನು ಕಾಣಬಹುದು.

ಬಾಲಕ ಅಪಘಾತಕ್ಕೂ ಮುನ್ನ ಮದ್ಯ ಸೇವನೆ ಮಾಡಿದ್ದ ಎಂದು ಹೇಳಲಾಗುತ್ತಿದೆ. ಮಹಾರಾಷ್ಟ್ರದಲ್ಲಿ 25ವರ್ಷದೊಳಗಿನ ಮಕ್ಕಳು ಮದ್ಯ ಸೇವಿಸುವಂತಿಲ್ಲ. ಆತ ಬಂಧನಕ್ಕೊಳಗಾಗಿ 15 ಗಂಟೆಯೊಳಗೆ ಜಾಮೀನು ನೀಡಿರುವ ಬಾಲಾಪರಾದಿ ನ್ಯಾಯಾಲಯದ ತೀರ್ಪಿನ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನ್ಯಾಯಾಲಯವು ಆತನಿಗೆ ಅಪಘಾತ ಹಾಗೂ ಪರಿಹಾರ ಕುರಿತು 300 ಪದಗಳ ಪ್ರಬಂಧ ಬರೆಯಲು ಕೇಳಿದೆ ಅಷ್ಟೇ ಅಲ್ಲದೆ ಡಿ ಅಡಿಕ್ಷನ್​ ಕೇಂದ್ರಕ್ಕೆ ಸೇರಬೇಕು ಹಾಗೂ ಟ್ರಾಫಿಕ್​ ಪೊಲೀಸರ ಜತೆ 15 ದಿನಗಳ ಕಾಲ ಕೆಲಸ ಮಾಡುವ ಷರತ್ತಿನ ಮೇರೆಗೆ ಜಾಮೀನು ನೀಡಲಾಗಿದೆ.

ಹಿರಿಯ ಅಧಿಕಾರಿಯ ಪ್ರಕಾರ, ಬಿಲ್ಡರ್ ಆಗಿರುವ ಬಾಲಕನ ತಂದೆಯನ್ನು ಪುಣೆಗೆ ಕರೆತರಲಾಗುತ್ತಿದ್ದು, ಅಲ್ಲಿ ಆತನನ್ನು ಬಂಧಿಸುವ ಸಾಧ್ಯತೆಯಿದೆ. ತಂದೆ, ಎರಡು ರೆಸ್ಟೋರೆಂಟ್‌ಗಳ ಮಾಲೀಕರು ಮತ್ತು ಅವರ ಸಿಬ್ಬಂದಿಯ ವಿರುದ್ಧ ಸೋಮವಾರ ಮೋಟಾರ್ ವಾಹನ ಕಾಯ್ದೆ (ಎಂವಿಎ) ಮತ್ತು ಜುವೆನೈಲ್ ಜಸ್ಟೀಸ್ ಆಕ್ಟ್ (ಜೆಜೆಎ) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಾಲಕನಿಗಿರುವ ಷರತ್ತುಗಳೇನು ?

15 ದಿನಗಳ ಕಾಲ ಟ್ರಾಫಿಕ್ ಪೊಲೀಸರೊಂದಿಗೆ ಕೆಲಸ ಮಾಡಬೇಕು ಮನೋವೈದ್ಯಕೀಯ ಮೌಲ್ಯಮಾಪನ ಮತ್ತು ಚಿಕಿತ್ಸೆಗೆ ಒಳಗಾಗಬೇಕು ರಸ್ತೆ ಅಪಘಾತಗಳ ಪರಿಣಾಮ ಮತ್ತು ಅವುಗಳ ಪರಿಹಾರ ಕುರಿತು 300 ಪದಗಳ ಪ್ರಬಂಧವನ್ನು ಬರೆಯಬೇಕು ವ್ಯಸನಮುಕ್ತ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಬೇಕು ಭವಿಷ್ಯದಲ್ಲಿ ಅಪಘಾತಕ್ಕೊಳಗಾದವರಿಗೆ ಸಹಾಯ ಮಾಡುವುದು. ಅಪಘಾತದ ಸ್ಥಳದಲ್ಲಿ ಜನಸಮೂಹದಿಂದ ಅಪ್ರಾಪ್ತನನ್ನು ಥಳಿಸುತ್ತಿರುವ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ.

ಕಾರಿನಲ್ಲಿ ಮೂರು ಮಂದಿ ಇದ್ದರು ಅದರಲ್ಲಿ ಒಬ್ಬರು ಅಪಘಾತವಾದ ತಕ್ಷಣ ಕಾರಿನಿಂದ ಓಡಿ ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ. ಅಪ್ರಾಪ್ತ ಬಾಲಕನಿಗೆ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಬಾರ್ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.